ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶ ಭೀಕರ ಪರಿಸ್ಥಿತಿಯಲ್ಲಿದ್ದಾಗ ಮನಮೋಹನ್ ಕಾಪಾಡಿದರು; ದೇವೇಗೌಡ

ದೇಶದ ಆರ್ಥಿಕತೆ ಸುಧಾರಿಸಿದ ನಾಯಕ

Author2 by Author2
December 27, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

August 11, 2026
ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

August 11, 2026

ಬೆಂಗಳೂರು: ದೇಶದ 130 ಟನ್ ಚಿನ್ನವನ್ನು ಅಡ ಇಟ್ಟಿದ್ದ ಭೀಕರ ಪರಿಸ್ಥಿತಿಯಲ್ಲಿ ಹಣಕಾಸು ಮಂತ್ರಿಯಾಗಿ ಮನಮೋಹನ್ ಸಿಂಗ್ (Manmohan Singh) ದೇಶಕ್ಕಾಗಿ ಮಾಡಿದ ಕಾರ್ಯವನ್ನು ಯಾರೂ ಮರೆಯುವಂತಿಲ್ಲ ಎಂದು ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಜೆಡಿಎಸ್ ಕಚೇರಿಯಲ್ಲಿ ನಡೆದ ಸಂತಾಪ ಸೂಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ದುಃಖದ ದಿವಸ. ಮನಮೋಹನ್ ಸಿಂಗ್ ಅವರನ್ನು ನಾನು ನೋಡಿದ್ದು ಲೋಕಸಭೆಯಲ್ಲಿ. 1991 ರಲ್ಲಿ ನಾನು ಕರ್ನಾಟಕದಿಂದ ಮೊದಲ ಬಾರಿಗೆ ಲೋಕಸಭೆಗೆ ಹೋದಾಗಿ ನೋಡಿದ್ದೆ. ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಮಂತ್ರಿ ಆಗಿದ್ದರು ಎಂದು ನೆನೆದರು.
ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದರು. ವಿಶ್ವಸಂಸ್ಥೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಅವರ ತಂದೆ ಪಾಕಿಸ್ತಾನದಿಂದ ಬಂದವರು. ಸಿಂಗ್ ಅವರು ಆರ್ಥಿಕವಾಗಿ ತುಂಬಾ ಬುದ್ದಿವಂತರು. ಅವರಿಗೆ ಬಹಳ ಅನುಭವ ಆರ್ಥಿಕ ವಿಚಾರದಲ್ಲಿ ಇತ್ತು. ನರಸಿಂಹ ರಾವ್ ಪ್ರಧಾನಿ ಆದಾಗ ದೇಶದ ಸ್ಥಿತಿ ತುಂಬಾ ಹದಗೆಟ್ಟಿತ್ತು. ಆಗ ನಮ್ಮ ದೇಶದ 130 ಟನ್ ಚಿನ್ನವನ್ನ ಅಡ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಅವತ್ತು ಇತ್ತು. ಅಂತಹ ಸನ್ನಿವೇಶದಲ್ಲಿ ಹಣಕಾಸು ಮಂತ್ರಿಯಾಗಿ ಕೆಲಸ ಮಾಡಿದ್ದರು. ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ತಮ್ಮ ಪ್ರಯತ್ನ ಆರಂಭಿಸಿ, ಯಶಸ್ವಿಯಾದರು ಎಂದು ಹೇಳಿದ್ದಾರೆ.
ಅವರೊಬ್ಬ ದೇಶದ ಪ್ರಧಾನಿ ಆಗಿದ್ದವರು. ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಪಕ್ಷದ ಪರವಾಗಿ, ವಯಕ್ತಿಕವಾಗಿ ಗೌರವ ಸಲ್ಲಿಸಿದ್ದಾರೆ. ಇವತ್ತು ನಮ್ಮ ಪಕ್ಷದ ಸಂಘಟನೆ ಸಭೆ ಇತ್ತು. ಇದೊಂದು ಶೋಕ ದಿನ. 7 ದಿನ ಶೋಕಾಚರಣೆ ಮಾಡಲಾಗುತ್ತಿದೆ ಎಂದಿದ್ದಾರೆ.

Tags: FinanceLOKASABHAManamohan singhRBI Governor
ShareTweetSendShare
Join us on:

Related Posts

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

by Shwetha
August 11, 2026
0

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ದೌರ್ಜನ್ಯದ ಆರೋಪ ಖಂಡಿಸಿ ವಿರೋಧ ಪಕ್ಷದ ಸಂಸದರು...

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

by Shwetha
August 11, 2026
0

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜಕೀಯ ಜಿದ್ದಾಜಿದ್ದಿ ಈಗ ಹೊಸ ರೂಪ ಪಡೆದುಕೊಂಡಿದೆ. ತಮ್ಮ ಚುಚ್ಚುಮಾತು ಮತ್ತು ವಿಶಿಷ್ಟ ಶೈಲಿಯ ವ್ಯಂಗ್ಯಕ್ಕೆ ಹೆಸರಾದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram