ಮನ್ ಮುಲ್ ಹಗರಣ : ಇಬ್ಬರು ಮಹಿಳಾ ಅಧಿಕಾರಿಗಳ ಅಮಾನತು
ಮಂಡ್ಯ : ಮನ್ ಮುಲ್ ಗೆ ನೀರು ಮಿಶ್ರಿತ ಹಾಲು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಅಮಾನತುಗೊಂಡ ಅಧಿಕಾರಿಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಮನ್ ಮುಲ್ ಗೆ ನೀರು ಮಿಶ್ರಿತ ಹಾಲು ಪೂರೈಕೆ ಪ್ರಕರಣ ಸಂಬಂಧ ಮನ್ ಮುಲ್ ನಲ್ಲಿ ಮೊದಲು ನಾಲ್ವರು ಅಧಿಕಾರಿಗಳು, ಎರಡನೇ ಹಂತದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.
ಇದೀಗ ಮತ್ತೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ಹಾಲು ಮಹಾ ಮಂಡಳಿಯ ಜಂಟಿ ನಿರ್ದೇಶಕಿ ವಸಂತಲಾ ಹಾಗೂ ಮನ್ ಮುಲ್ ನ ಉಪ ವ್ಯವಸ್ಥಾಪಕಿ ಶೈಲಜಾ ಸಸ್ಪೆಂಡ್ ಆದ ಅಧಿಕಾರಿಗಳಾಗಿದ್ದಾರೆ.
ಮನ್ ಮುಲ್ ಗೆ ಟ್ಯಾಂಕಟ್ ಗಳ ಮೂಲಕ ಬರುತ್ತಿದ್ದ ಹಾಲಿನ ಗುಣಮಟ್ಟವನ್ನು ಪರಿಶೀಲನೆ ಮಾಡದ ಕಾರಣ ಕರ್ನಾಟಕ ಹಾಲು ಮಹಾ ಮಂಡಳಿಯ ಜಂಟಿ ನಿರ್ದೇಶಕಿ ವಸಂತಲಾ ಅವರನ್ನು ಕೆಎಂಎಫ್ ಎಂಡಿ ಸತೀಶ್ ಅವರು ಅಮಾನತು ಮಾಡಿದ್ದಾರೆ.