ಬೆಂಗಳೂರು: ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ಸರ್ಕಾರ ವರ್ಸಸ್ ರಾಜ್ಯಪಾಲರು ಎನ್ನುವಂತಾಗಿತ್ತು. ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಪರ- ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇನ್ನೂ ಹಲವು ಕಾಂಗ್ರೆಸ್ ನಾಯಕರಿಗೆ (Congress Leaders) ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ನಂತರ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ್ (MB Patil) ಹಾಗೂ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧದ ದೂರು ರಾಜ್ಯಪಾಲರ ಮುಂದಿದೆ. ಡಿಸಿಎಂ ಡಿಕೆಶಿ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆಯುತ್ತಿದೆ ಎಂಬುವುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತಾಗಿದೆ.
ಈ ಕುರಿತು ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ತಮ್ಮ ಬಳಿ ಬಾಕಿ ಇಲ್ಲ ಎಂದು ರಾಜಭವನ ಅಧಿಕೃತ ದಾಖಲೆಯನ್ನು ನ್ಯಾಯಾಲಯಕ್ಕೆ ನೀಡಿದೆ. ಈಗ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಶುರುವಾಗಿದ್ದು, ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡಬೇಕಿದೆ.








