ಮಂಗಳೂರು – ಅಗತ್ಯ ವಸ್ತು ಖರೀದಿ ನೆಪದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದೆ ತಿರುಗಾಡುತ್ತಿರುವ ಸಾರ್ವಜನಿಕರು
ಕೊರೋನವೈರಸ್ ನ ಎರಡನೇ ಅಲೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ತನ್ನ ಭೀತಿಯನ್ನು ಮುಂದುವರೆಸಿದೆ. ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.
ಜಿಲ್ಲೆಯಲ್ಲಿ ಲಾಕ್ಡೌನ್ ಅನ್ನು ಜೂನ್ 20 ರವರೆಗೆ ವಿಸ್ತರಿಸಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಅವರು ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಸಾರ್ವಜನಿಕರು ಮಾತ್ರ ಇದಕ್ಕೆ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.
ಅನೇಕರು ಇನ್ನೂ ಅಗತ್ಯ ವಸ್ತುಗಳನ್ನು ಖರೀದಿಸುವ ನೆಪದಲ್ಲಿ ತಿರುಗಾಟ ಪ್ರಾರಂಭಿಸಿದ್ದಾರೆ. ಜನರು ಸಾಮಾಜಿಕ ಅಂತರವನ್ನು ಸಹ ಕಾಪಾಡಿಕೊಳ್ಳುತ್ತಿಲ್ಲ. ಜೂನ್ 12 ರ ಶನಿವಾರ, ಜನರು ಮಾಸ್ಕ್ ಗಳನ್ನು ಸಹ ಧರಿಸದೆ ತಿರುಗಾಡುತ್ತಿರುವುದು ಕಂಡು ಬಂದಿದೆ.
ಅದೇ ಪರಿಸ್ಥಿತಿ ಮುಂದುವರಿದರೆ, ಜೂನ್ 20 ರ ನಂತರವೂ ಜಿಲ್ಲೆಯಲ್ಲಿ ಲಾಕ್ಡೌನ್ ವಿಸ್ತರಿಸುವ ಸಾಧ್ಯತೆಗಳಿವೆ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಕೊರೋನಾ ಸಮಯದಲ್ಲಿ ಅಮೃತ ಬಳ್ಳಿ ಕಷಾಯದ ಆರೋಗ್ಯ ಪ್ರಯೋಜನಗಳು#Saakshatv #healthtips #Giloy https://t.co/z4DsWOV94S
— Saaksha TV (@SaakshaTv) June 11, 2021
ಸೋಯಾ ಚಂಕ್ಸ್ ಮಂಚೂರಿ#soyaChuck #Manchurian https://t.co/Hhd2pyUlPt
— Saaksha TV (@SaakshaTv) June 11, 2021
ಇಂದಿನ ಸಮಯದಲ್ಲಿ ಮನೆಯಲ್ಲಿರಬೇಕಾದ 5 ವೈದ್ಯಕೀಯ ಸಾಧನಗಳು#medicaldevices https://t.co/t31elkxMq4
— Saaksha TV (@SaakshaTv) June 11, 2021
ರೈಲ್ವೆ ಪ್ರಯಾಣಿಕರ ಗಮನಕ್ಕೆ – ರೈಲ್ವೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಳೆ ನಿಯಮ ಬದಲಾವಣೆ ಸಾಧ್ಯತೆ#Trainpassenger https://t.co/8l8UsNRUJ7
— Saaksha TV (@SaakshaTv) June 11, 2021
#Mangalore