ಮುಖ್ಯಮಂತ್ರಿಗಳ ದಿಢೀರ್ ಬದಲಾವಣೆ ಸರಿಯಲ್ಲ : ಮರುಳಸಿದ್ಧ ಸ್ವಾಮೀಜಿ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರವಾಹ, ಕೋವಿಡ್ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.
ಇಂತಹ ಮುಖ್ಯಮಂತ್ರಿಗಳನ್ನು ದಿಢೀರ್ ಬದಲಾಯಿಸುವುದು ಸರಿಯಲ್ಲ ಎಂದು ಬಸವ ಕೇಂದ್ರದ ಡಾ.ಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕಾರ ಅವಧಿ ಪೂರೈಸಲು ಹೈಕಮಾಂಡ್ ಅವಕಾಶ ಮಾಡಿಕೊಡಬೇಕು.
ಯಡಿಯೂರಪ್ಪ ಸರ್ವ ಜನಾಂಗದ ಆಶಯಗಳಿಗೆ ಸ್ಪಂದಿಸುತ್ತಾ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರವಾಹ, ಕೋವಿಡ್ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇಂತಹ ಮುಖ್ಯಮಂತ್ರಿಗಳನ್ನು ದಿಢೀರ್ ಬದಲಾಯಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಎಲ್ಲರೂ ಒಪ್ಪಿಕೊಳ್ಳುವ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಬೆಳವಣಿಗೆ ಅಲ್ಲ.
ಅವರಿಗೆ ನೆಮ್ಮದಿಯಿಂದ ಆಡಳಿತ ನಡೆಸಲು ಪಕ್ಷದ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.