ಹಿಂದೂ ಜೋಡಿಯ ಮದುವೆಯನ್ನು (Marriage) ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವೆಂಗಾರ ಅಮ್ಮಂಚೇರಿ ಭಗವತಿ ದೇವಸ್ಥಾನದಲ್ಲಿ ವಿಷ್ಣು ಮತ್ತು ಗೀತಾ ದಂಪತಿಯ ವಿವಾಹವು ಅದ್ದೂರಿಯಾಗಿ ನಡೆದಿದೆ. ಪಾಲಕ್ಕಾಡ್ ಮೂಲದ ಗೀತಾ ವೆಂಗಾರದ ಮನಾಟ್ಟಿಪರಂಬುವಿನ ರೋಸ್ ಮ್ಯಾನರ್ ಶಾರ್ಟ್ ಸ್ಟೇ ಹೋಮ್ನಲ್ಲಿ ವಾಸಿಸುತ್ತಿದ್ದರು. ಕೇರಳ ಜಿಲ್ಲೆಯ ವೆಂಗರಾ ಪಂಚಾಯತ್ನ 12 ನೇ ವಾರ್ಡ್ನ ಮುಸ್ಲಿಂ ಯೂತ್ ಲೀಗ್ ಸಮಿತಿಯು ಮಾಡಿದೆ.
ಈ ಮದುವೆ ಸಮಾರಂಭದಲ್ಲಿ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಸೈಯದ್ ಸಾದಿಕಲಿ ಶಿಹಾಬ್ ತಂಗಳ್, ಹಿರಿಯ ಮುಖಂಡ ಹಾಗೂ ಶಾಸಕ ಪಿ.ಕೆ.ಕುನ್ಹಾಲಿಕುಟ್ಟಿಯವರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಾಂಗ್ರೆಸ್ನ ಹಲವಾರು ನಾಯಕರು ಮದುವೆಗೆ ಆಗಮಿಸಿ ನವವಧುಗಳಿಗೆ ಹಾರೈಸಿದರು.