ಮಂಡ್ಯ: ದೇಶಾದ್ಯಂತ ತ್ಯಾಗ ಬಲಿದಾನದ ಸಂಕೇತವಾದ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮ ಸಡಗರಗಳಿಂದ ಆಚರಣೆ ಮಾಡುತ್ತಿದ್ದಾರೆ.
ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಬರ್ಂಧ ಹೇರಿರುವ ಹಿನ್ನೆಲೆಯಲ್ಲಿ ಸಮೀಪದ ಮಸೀದಿಗಳಲ್ಲೇ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಂಡ್ಯದ ಮಸೀದಿಗಳಲ್ಲಿ 50ಕ್ಕೂ ಹೆಚ್ಚು ಜನ ಸೇರಿದಂತೆ ಜಿಲ್ಲಾಡಳಿತ ನಿಬರ್ಂಧ ಹೇರಿದೆ. ಹೀಗಾಗಿ ಮಸೀದಿಯಲ್ಲೇ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ಈದ್ಗಾ ಮೈದಾನದಲ್ಲಿ ಸಾವಿರಾರು ಜನ ಸೇರಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಹೆಮ್ಮಾರಿ ಕೊರೋನಾ ವೈರಸ್ ಆದಷ್ಟು ಬೇಗ ನಿವಾರಣೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.