ಕಾರ್ಖಾನೆಯಲ್ಲಿ ಅಗ್ನಿ ದುರಂತ 6 ಸಾವು
ಆಂಧ್ರಪ್ರದೇಶ: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿ, ಸುಮಾರು 6 ಜನ ಸಾವನ್ನಪಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಮಾಸುನೂರು ವಲಯದ ಅಕ್ಕಿರೆಡ್ಡಿಗುಡೆಂನಲ್ಲಿ ನಡೆದಿದೆ.
ಪೋರಸ್ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದು, ದುರಂತದಲ್ಲಿ 13 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನಜಿವೀಡು ಆಸ್ಪತ್ರೆಗೆ ರವಾನಿಸಲಾಗಿದೆ. ಕೆಲವರ ಸ್ಥತಿ ಚಿಂತಾಜನಕವಾಗಿದ್ದು, ಅವರನ್ನು ವಿಜಯವಾಡ ಸ್ಥಳಾಂತರಿಸಲಾಗಿದೆ.
ಇನ್ನೂ ಘಟನೆಯಲ್ಲಿ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡ ಸಂಭಿಸುವ ಸಮಯದಲ್ಲಿ ಕಾರ್ಖಾನೆಯಲ್ಲಿ 150 ಜನ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಅದೃಷ್ಟವಶಾತ್ ಸಾಕಷ್ಟು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕೆಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಲೂರು ಎಸ್ಪಿ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಫಾರ್ಮಾಸ್ಯುಟಿಕಲ್ಸ್ ತಯಾರಿಕೆಯಲ್ಲಿ ಬಳಸುವ ಪುಡಿಯನ್ನು ಪೋರಸ್ ಕಾರ್ಖಾನೆಯಲ್ಲಿ ಉತ್ಪಾದಿಸಲಾಗುತ್ತಿತ್ತು ಎಂಬುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ.