ಬಳ್ಳಾರಿ: ಸೇವೆ ಖಾಯಂ ಹಾಗೂ ವೇತನ ತಾರತಮ್ಮ ನಿವಾರಣೆಗೆ ಆಗ್ರಹಿಸಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ 2 ಸಾವಿರ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದಾರೆ.
ಕೇವಲ ಎಂಬಿಬಿಎಸ್ ಮಾಡಿದ 500 ಗುತ್ತಿಗೆ ವೈದ್ಯರ ಸೇವೆ ಖಾಯಂ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ತಮ್ಮ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಯುಷ್ ವೈದ್ಯರು ಸರ್ಕಾರವನ್ನು ಆಗ್ರಹಿಸಿದ್ದರು.
ಈ ಸಂಬಂಧ ಸರ್ಕಾರಕ್ಕೆ ಇಂದಿಗೆ(ಜುಲೈ 15)ವರೆಗೆ ಗಡುವು ನೀಡಿದ್ದರು. ಈ ಗಡುವಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಈ ವಿಷಯ ತಿಳಿಸಿದ ಆಯುಷ್ ಫೆಡರೇಶನ್ ಆಫ್ ಕರ್ನಾಟಕ ಸಂಘಟನೆಯ ಖಜಾಂಚಿ ಡಾ.ಅನಂದ್ ಕಿರಿಶಾಳ್, ಸರ್ಕಾರ ನಮ್ಮ ಬೇಡಿಕೆಗಳಿಗೆ ಮಣಿಯದ ಹಿನ್ನೆಲೆಯಲ್ಲಿ ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ
ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...







