ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದರು.
ಬೆಂಗಳೂರು ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಿವುದು. ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ. ಸೋಂಕು ಧೃಢಪಟ್ಟವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕಗಳಿಗೆ ಮಾಹಿತಿ ನೀಡಲು, ರೋಗಲಕ್ಷಣವಿರುವ ಸೋಂಕಿತರ ಪತ್ತೆಗಾಗಿ, ರೋಗಲಕ್ಷಣವಿಲ್ಲದ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ ಮತ್ತು ರೋಗಲಕ್ಷಣವಿದ್ದವರಿಗೆ ಆಸ್ಪತ್ರೆ, ಅಂಬುಲನ್ಸ್ ಸಂಯೋಜನೆಗಾಗಿ ಮತ್ತು ಇತರೆ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸಾಹಾಯವಾಣಿ ಕಲ್ಪಿಸುವುದು. ರಾಪಿಡ್ ಆಂಟಿಜೆನ್ ಟೆಸ್ಟ್ ಅವಶ್ಯಕತೆ ಇರುವ ಕ್ಲಸ್ಟರ್ ಗಳನ್ನು ಗುರುತಿಸುವುದು ಮತ್ತು ರೋಗಿಗಳನ್ನು ದಾಖಲಿಸಿಕೊಳ್ಳಲು ಇರುವ ಗೊಂದಲ ನಿವಾರಿಸಲು ಆಸ್ಪತ್ರೆಗಳಲ್ಲಿ ಆಂಟಿಜೆನ್ ಟೆಸ್ಟ್ ವ್ಯವಸ್ಥೆ ಕಲ್ಪಿಸುವುದು. RT-PCR ಪರೀಕ್ಷೆಯ ಸ್ಯಾಂಪಲ್ ಗಳನ್ನು ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ವರದಿ ವಿಳಂಬವಾಗದಂತೆ ಕ್ರಮ ಕೈಗೊಳ್ಳುವುದು. ಆಂಬ್ಯುಲೆನ್ಸ್ ಲಭ್ಯತೆ ಹೆಚ್ಚಿಸುವುದು ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ಗಾಗಿ ಮೊಬೈಲ್ ಟೆಸ್ಟಿಂಗ್ ವಾಹನ ಸಜ್ಜುಗೊಳಿಸುವುದು ಮೊದಲಾದ ವಿಚಾರಗಳ ಬಗ್ಗೆ ಸಚಿವರು ಸಲಹೆ ಮತ್ತು ಮಾರ್ಗದರ್ಶನಗಳನ್ನು ನೀಡಿದರು.
ಅಪರ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್ ಅಕ್ತರ್, ಶಾಲಿನಿ ರಜನೀಶ್, ಎಲ್.ಎ.ಆತ ಕ್, ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಪಾಂಡೆ ಮತ್ತು ಇತರೆ ಹಿರಿಯ ಅಧಿಕಾರಿಗಕು ಉಪಸ್ಥಿತರಿದ್ದರು.