ಫೈನಲ್ ಇಯರ್ ಮೆಡಿಕಲ್ ಎಕ್ಸಾಂ ಬಗ್ಗೆ ಸುಧಾಕರ್ ಮಾಹಿತಿ DR K SUDAKAR
ಮೈಸೂರು :ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಎಲ್ಲಾ ಶಾಲಾ – ಕಾಲೇಜುಗಳನ್ನ ಸ್ಥಗಿತಗೊಳಿಸಲಾಗಿದೆ.
ಜೊತೆಗೆ ಈಗಾಗಲೇ ನಿಗದಿಯಾಗಿದ್ದ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗುತ್ತಿದೆ. ಅದರಂತೆ ಅಂತಿಮ ವರ್ಷದ ವೈದ್ಯಕೀಯ ಪರೀಕ್ಷೆಯನ್ನೂ ಕೂಡ ಮುಂದೂಡಲಾಗುವುದು ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಿಮ ವರ್ಷದ ವೈದ್ಯಕೀಯ ಪರೀಕ್ಷೆಯನ್ನು ಎರಡು ತಿಂಗಳು ಮುಂದೂಡಲಾಗಿದೆ.
ಕೋವಿಡ್ ಅಲೆ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಸೇವೆ ಒದಗಿಸಲು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ದುಡ್ಡಿಗಾಗಿ ದುಡ್ಡಿಗಾಗಿ ಕೊವಿಡ್ ರಿಪೋರ್ಟ್ ಮಾರಾಟ ಪ್ರಕರಣದ ಬಗ್ಗೆ ಮಾತನಾಡಿ, ಅಯೋಗ್ಯನ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ ನೀಡಿದ್ದೇನೆ.
ಕಾರಿನಲ್ಲಿ ಬರುವಾಗಲೇ ನಾನು ಬಿಬಿಎಂಪಿ ಆಯುಕ್ತರ ಜತೆ ಮಾತನಾಡಿದ್ದೇನೆ ಎಂದರು.