ರಾತ್ರೋರಾತ್ರಿ ಪಂಚಮಸಾಲಿ ಸಮುದಾಯದ ಬಿಜೆಪಿ ಶಾಸಕರ ಸಭೆ
ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆ
ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ
ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ಶಾಸಕರು ಬ್ಯಾಕ್ ಟು ಬ್ಯಾಕ್ ಸಭೆಗಳನ್ನು ನಡೆಸುತ್ತಿದ್ದಾರೆ. ಮೊನ್ನೆ ರಾತ್ರಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ರಹಸ್ಯ ಮೀಟಿಂಗ್ ನಡೆಸಿದ್ದ ಕಮಲ ಕಲಿಗಳು, ನಿನ್ನೆ ರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ. ಪಂಚಮಸಾಲಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ಸಿ.ಎಂ. ನಿಂಬಣ್ಣವರ್, ಮಹೇಶ್ ಕುಮಟಳ್ಳಿ, ಮೋಹನ್ ಲಿಂಬಿಕಾಯಿ, ಸಿದ್ದು ಸವದಿ, ಶಂಕರ ಪಾಟೀಲ್ ಮುನೇನಕೊಪ್ಪ, ಅರವಿಂದ ಬೆಲ್ಲದ್, ಆನಂದ್ ಮಾಮವಿ, ಮಹಾಂತೇಶ ದೊಡ್ಡಗೌಡರ, ಶಶಿಕಾಂತ ನಾಯಕ, ಅರುಣ್ ಕುಮಾರ್ ಪೂಜಾರ್, ಸಂಗಣ್ಣ ಕರಡಿ ಹಾಗೂ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು ಎನ್ನಲಾಗಿದೆ.
ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಯಡಿಯೂರಪ್ಪಗೆ ಒತ್ತಾಯಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.