ಕೋರನಾ ನಿಯಂತ್ರಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮೇರೆಗೆ ಬೆಂಗಳೂರಿನ ಕೆ. ಆರ್ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಮುಖಂಡರು ಧರ್ಮಗುರುಗಳ ಜೊತೆ ಸಭೆ ನಡೆಸಿ, ಸರ್ಕಾರದ ಕಾರ್ಯಗಳಿಗೆ ಬೆಂಬಲ ಸೂಚಿಸುವ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ತಪಾಸಣೆಗೆ ಸಹಕರಿಸುವಂತೆ ಎಲ್ಲ ಮಸಿದಿಗಳ ಮೂಲಕ ಮುಸ್ಲಿಂ ಸಮಾಜದ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ಸೂಚನೆಯಂತೆ ಮಸೀದಿಗಳಲ್ಲಿ ನಮಾಜ್ ಮಾಡದೇ ಮನೆಗಳಲ್ಲಿಯೇ ನಮಾಜ್ ಮಾಡುವಂತೆ ಸಮಾಜದ ಜನರಿಗೆ ಮಾಹಿತಿ ನೀಡಲು ಮುಸ್ಲಿಂ ಧರ್ಮಗುರುಗಳ ಜೊತೆಯಲ್ಲಿ ನಡೆದ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...








