ಕೋರನಾ ನಿಯಂತ್ರಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮೇರೆಗೆ ಬೆಂಗಳೂರಿನ ಕೆ. ಆರ್ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಮುಖಂಡರು ಧರ್ಮಗುರುಗಳ ಜೊತೆ ಸಭೆ ನಡೆಸಿ, ಸರ್ಕಾರದ ಕಾರ್ಯಗಳಿಗೆ ಬೆಂಬಲ ಸೂಚಿಸುವ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ತಪಾಸಣೆಗೆ ಸಹಕರಿಸುವಂತೆ ಎಲ್ಲ ಮಸಿದಿಗಳ ಮೂಲಕ ಮುಸ್ಲಿಂ ಸಮಾಜದ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ಸೂಚನೆಯಂತೆ ಮಸೀದಿಗಳಲ್ಲಿ ನಮಾಜ್ ಮಾಡದೇ ಮನೆಗಳಲ್ಲಿಯೇ ನಮಾಜ್ ಮಾಡುವಂತೆ ಸಮಾಜದ ಜನರಿಗೆ ಮಾಹಿತಿ ನೀಡಲು ಮುಸ್ಲಿಂ ಧರ್ಮಗುರುಗಳ ಜೊತೆಯಲ್ಲಿ ನಡೆದ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








