ಬೆಳಗಾವಿ: ಮಹಾರಾಷ್ಟ್ರದ ಗಡಿಯನ್ನು ಹೊಂದಿರುವ ಬೆಳಗಾವಿಯನ್ನು ಕರ್ನಾಟಕ ಆಕ್ರಮಿತ ಪ್ರದೇಶ ಎಂದಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹಾಗೂ ಶಿವಸೇನೆ ಪುಂಡಾಟಿಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಗಡುವು ನೀಡಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಇಲ್ಲವಾದ್ರೆ ಮುಖ್ಯಮಂತ್ರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಾಡದ್ರೋಹಿ ಎಂಇಎಸ್ ಸಂಘಟನೆಯನ್ನ ನಿಷೇಧಿಸಬೇಕು. 15 ದಿನಗಳಲ್ಲಿ ನಿಷೇಧ ಮಾಡಲು ಗಡುವು ನೀಡಿರುವ ವಾಟಾಳ್ ನಾಗರಾಜ್, ಎಲ್ಲ ಕನ್ನಡ ಪರ ಸಂಘಟನೆಗಳು ಬೆಳಗಾವಿಗೆ ನುಗ್ಗುತ್ತೇವೆ. ಕರ್ನಾಟಕ ಬಂದ್ ಕುರಿತು ಮುಂದೆ ತೀರ್ಮಾನ ಮಾಡುತ್ತೇವೆ. ನಿಷೇಧ ಮಾಡದೇ ಇದ್ದರೆ ಸಿಎಂ ಕಚೇರಿಗೆ ನುಗ್ಗಿ ರಾಜೀನಾಮೆ ಕೇಳುತ್ತೇವೆ ಎಂದು ತಿಳಿಸಿದ್ದಾರೆ.
ನಾವು ಯಾವ ಪಕ್ಷದ ಏಜೆಂಟರಲ್ಲ. ಬಿಜೆಪಿಯವರು ಹಿಂದಿ ಏಜೆಂಟರು. ಬೆಳಗಾವಿಯ ಯಾವ ರಾಜಕಾರಣಿಗಳಿಗೂ ಗಂಡಸ್ತನ ಇಲ್ಲ ಎನ್ನುವ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.
ಉದ್ಧವ್ ಠಾಕ್ರೆ ಕಿಡಿ
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿಯನ್ನು ಕರ್ನಾಟಕ ಆಕ್ರಮಿತ ಪ್ರದೇಶ, ಅದನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಂಡೇ ತೀರುತ್ತೇವೆ ಎನ್ನುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಇದರ ನಂತರ ಕೊಲ್ಹಾಪುರ ಶಿವಸೇನೆ ಕಾರ್ಯಕರ್ತರು ಶಿನ್ನೊಳ್ಳಿ ಗಡಿ ನುಗ್ಗಲು ಯತ್ನಿಸಿದರು. ಈ ವೇಳೆ ಕರ್ನಾಟಕ ಪೊಲೀಸರು ಅವರನ್ನು ಹಿಮ್ಮೆಟ್ಟಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಕನ್ನಡ ಧ್ವಜ ಸ್ಥಾಪನೆ ಮಾಡಿರುವುದು ಎಂಇಎಸ್, ಶಿವಸೇನೆ ಕರ್ನಾಟಕದ ವಿರುದ್ಧ ಕಿರಿಕ್ ಮಾಡಲು ಕಾರಣ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel