ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MI vs LSG Match preview : ಸೇಡಿನ ಸಮರ ಶುರು.. ಗೆಲುವು ಯಾರಿಗೆ..?

Mahesh M Dhandu by Mahesh M Dhandu
April 24, 2022
in Newsbeat, Sports, ಕ್ರೀಡೆ
MI vs LSG Match preview ipl2022 saaksha tv
Share on FacebookShare on TwitterShare on WhatsappShare on Telegram

MI vs LSG Match preview : ಸೇಡಿನ ಸಮರ ಶುರು.. ಗೆಲುವು ಯಾರಿಗೆ..?

ಇಂಡಿಯನ್ ಪ್ರಿಮಿಯರ್ ಲೀಗ್ ನ 37 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಇಂದಿನ ಈ ಪಂದ್ಯ ನಡೆಯಲಿದೆ.

Related posts

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

December 15, 2025
45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

December 15, 2025

ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ತಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಆವೃತ್ತಿಯಲ್ಲಿ ಏಳು ಪಂದ್ಯಗಳನ್ನಾಡಿದೆ. ಈ ಪೈಕಿ ನಾಲ್ಕು ಪಂದ್ಯಗಳಲ್ಲಿ ಲಕ್ನೋ ತಂಡ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡ ಏಳು ಪಂದ್ಯಗಳನ್ನಾಡಿದ್ದು, ಒಂದೇ ಒಂದು ಪಂದ್ಯವನ್ನ ಈವರೆಗೂ ಗೆದ್ದಿಲ್ಲ. ಹೀಗಾಗಿ ಮೊದಲ ಗೆಲುವಿಗಾಗಿ ಇನ್ನೂ ಹಂಬಲಿಸುತ್ತಲೇ ಇದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಬೆಂಗಳೂರು ತಂಡ 18 ರನ್ ಗಳಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ರಾಹುಲ್ 30 ರನ್, ಕೃನಾಲ್ 45 ರನ್ ಗಳಿಸಿದ್ದರು.

ಇತ್ತ ಮುಂಬೈ ಇಂಡಿಯನ್ಸ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಚೆನ್ನೈ ತಂಡ ಮೂರು ವಿಕೆಟ್ ಗಳೊಂದಿಗೆ ಗೆಲುವು ಕಂಡಿದೆ.

ಕಳೆದ ಬಾರಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ತಂಡವನ್ನು 18 ರನ್ ಗಳಿಂದ ಸೋಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಮುಂಬೈ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಿದೆ.

MI vs LSG Match preview ipl2022 saaksha tv
MI vs LSG Match preview ipl2022 saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಲಕ್ನೋ ಸೂಪರ್ ಜೈಂಟ್ಸ್ ತಂಡ ಸಾಲಿಡ್ ಆಗಿದೆ. ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದೆ. ಆದ್ರೆ ಸಾಂಘೀಕ ಆಟ ಹಾಗೂ ಅನಾನುಭವಿ ಮಿಡಲ್ ಆರ್ಡರ್ ತಂಡದ ಹಿನ್ನೆಡೆಗೆ ಕಾರಣವಾಗುತ್ತಿದೆ. ರಾಹುಲ್, ಡಿಕಾಕಾ ತಂಡಕ್ಕೆ ಉತ್ತಮ ಆರಂಭ ನೀಡುತ್ತಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ಮನೀಷ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ ಸ್ಥಿರ ಪ್ರದರ್ಶನ ನೀಡಬೇಕಿದೆ. ಕಳೆ ಕ್ರಮಾಂಕದಲ್ಲಿ ತಂಡ ಸಾಲಿಡ್ ಆಗಿದೆ. ಮಾರ್ಕಸ್ ಸ್ಟೋಯ್ನಿಸ್, ಜೇನಸ್ ಹೋಲ್ಡರ್, ಕೃನಾಲ್ ಪಾಂಡ್ಯ ತಂಡದ ಶಕ್ತಿಯಾಗಿದ್ದಾರೆ. ಬೌಲಿಂಗ್ ನಲ್ಲಿ ಅವೇಶ್ ಖಾನ್, ದುಶ್ಮಾಂತಾ ಚಮ್ಮೀರಾ, ರವಿ ಬಿಷ್ನೋಯಿ ಒಳ್ಳೆ ಟಚ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪವರ್ ಪ್ಲೇನಲ್ಲಿ ಚಮೀರಾ ವಿಕೆಟ್ ಪಡೆಯುತ್ತಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಜೊತೆಗೆ ತಂಡದಲ್ಲಿ ಹೆಚ್ಚಿನ ಬೌಲಿಂಗ್ ಆಪ್ಷನ್ ಇರೋದು ಕೂಡ ಲಕ್ನೋ ತಂಡದ ಸ್ಟ್ರೆಂಥ್ ಆಗಿದೆ.

ಇತ್ತ ಮುಂಬೈ ಇಂಡಿಯನ್ಸ್ ತಂಡದ ವಿಚಾರಕ್ಕೆ ಬಂದರೇ ಬ್ಯಾಟಿಂಗ್ ನಲ್ಲಿ  ಪರವಾಗಿಲ್ಲ ಅನಿಸಿದ್ರೂ ಬೌಲಿಂಗ್ ವಿಭಾಗ ಸಂಪೂರ್ಣ ಕಳಫೆಯಾಗಿದೆ. ಜೊತೆಗೆ  ಸಾಂಘಿಕ ಆಟದ ಕೊರತೆ, ಸತತ ಸೋಲುಗಳು ತಂಡದಲ್ಲಿ ನಿರಾಸೆಯನ್ನು ಮೂಡಿಸಿದೆ. ಮುಂಬೈ ಪಂದ್ಯ ಗೆಲ್ಲಬೇಕಾದ್ರೆ 7 ಸೋಲುಗಳನ್ನು ಮರೆತು ಬ್ಯಾಟರ್ ಗಳು, ಬೌಲರ್ ಗಳು ಒಟ್ಟಾಗಿ  ಪ್ರದರ್ಶನ ನೀಡಬೇಕಿದೆ.

ಮುಖ್ಯವಾಗಿ ಮುಂಬೈ ತಂಡಕ್ಕೆ ಈ ಬಾರಿ ಆರಂಭಿಕರು ಕೈ ಕೊಡುತ್ತಿದ್ದಾರೆ. ರೋಹಿತ್, ಕಿಶಾನ್ ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲುತ್ತಲೇ ಇಲ್ಲ. ಡೆವಾಲ್ಡ್ ಬ್ರೆವಿಸ್ ಮಿಂಚಿ ಮರೆಯಾಗುತ್ತಿದ್ದಾರೆ. ಸೂರ್ಯ ಕುಮಾರ್ ಯಾದವ್, ತಿಲಕ್ ವರ್ಮಾ ಇಬ್ಬರೇ ಮುಂಬೈನ ಸದ್ಯದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ. ಕಿರಾನ್ ಪೊಲಾರ್ಡ್, ಡೆನಿಯನ್ ಸ್ಯಾಮ್ ಆಲ್ ರೌಂಡರ್ ಆಟ ಪ್ರದರ್ಶಿಸುತ್ತಿಲ್ಲ. ರಿಲೆ ಮೆರೆಡಿತ್, ಹೃತಿಕ್ ಶೋಕಿನ್, ಬೂಮ್ರಾ, ಜಯದೇವ್ ಉನಾದ್ಕಟ್ ಬೌಲಿಂಗ್ ನಲ್ಲಿ ಪರಿಣಾಮಕಾರಿಯಾಗಿಲ್ಲ. ಸದ್ಯ ಮುಂಬೈ ಫಾರ್ಮ್ ಅತ್ಯಂತ ಕಳಪೆಯಾಗಿದ್ದು, ಇಂದಿನ ಪಂದ್ಯಕ್ಕಾಗಿ ತಂಡದಲ್ಲಿ ಬದಲಾವಣೆಗನ್ನು ನಿರೀಕ್ಷಿಸಲಾಗಿದೆ.      

Tags: #Saaksha TVCricketLSGmiMI vs LSG
ShareTweetSendShare
Join us on:

Related Posts

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

by Shwetha
December 15, 2025
0

ನವದೆಹಲಿ: ಜಗತ್ತಿನ ಪ್ರತಿಷ್ಠಿತ ಫೋರ್ಬ್ಸ್‌ ಮ್ಯಾಗಜಿನ್ ಬಿಡುಗಡೆ ಮಾಡಿರುವ 2025ರ ಸಾಲಿನ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

by Shwetha
December 15, 2025
0

ನವದೆಹಲಿ: ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಆಘಾತಕಾರಿ ತೀರ್ಪೊಂದನ್ನು ನೀಡಿದೆ. ಸೇವಾವಧಿಯಲ್ಲಿ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವ ಸರ್ಕಾರಿ ನೌಕರರು ಕೇಂದ್ರ ನಾಗರಿಕ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram