ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರೋ ಸಂದರ್ಭದಲ್ಲೂ ಫೈನಾನ್ಸ್ ಸಂಸ್ಥೆಗಳಿಂದ ಸಾಲ ವಸೂಲಾತಿಗೆ ಯತ್ನ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಇಂದು ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರೊಂದಿಗೆ ಈ ವಿಚಾರವಾಗಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಹಿಳೆರು ಶಾಸಕರ ಬಳಿ ಸಮಸ್ಯೆ ಹೇಳಿಕೊಂಡಿದ್ದು, ಅಹವಾಲು ಸ್ವೀಕರಿಸಿ ಚಿಕ್ಕಮಾದು ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಇನ್ನೂ ಎರಡು ತಿಂಗಳು ಒತ್ತಡ ಹಾಕುವಂತಿಲ್ಲ ಎಂದು ಸೂಚಿಸಿದ್ದಾರೆ. ಅಲ್ದೇ ಆಧಾರ್ ಕಾರ್ಡ್ ಬ್ಲಾಕ್ ಮಾಡಿಸುವ ಬೆದರಿಕೆ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಸರ್ಕಾರದಿಂದಲೇ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಪತ್ರ ಬರೆಸುವ ಭರವಸೆ ನೀಡಿದ್ದಾರೆ.
ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ
ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...








