ಮೈಸೂರು: ರಾಜ್ಯದಲ್ಲಿ ಬರದ ಮಧ್ಯೆಯೂ ದಸರಾ ಆಚರಣೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಮೈಸೂರು ದಸರಾವನ್ನು (Mysuru Dasara) ವೀಕ್ಷಿಸಿದರು.
ಮೈಸೂರಿನಲ್ಲಿ (Mysuru) ನಾಡಹಬ್ಬ ದಸರಾ ಸಂಭ್ರಮ ಮನೆ ಮಾಡಿತ್ತು. ದಸರಾ ಜಂಬೂಸವಾರಿಯಲ್ಲಿ ಬಿಸಿಲನ್ನೂ ಲೆಕ್ಕಿಸದೆ ಜನರು ವೀಕ್ಷಿಸಿದರು. ಬೆಳಗ್ಗೆಯಿಂದಲೇ ಅರಮನೆ ಮೈದಾನದಿಂದ ಹಿಡಿದು ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಬನ್ನಿಮಂಟಪದ ವರೆಗೆ ಜನರು ಕಿಕ್ಕಿರಿದು ತುಂಬಿದ್ದರು. ಇಂದು ಅರಮನೆಯಲ್ಲಿ ಸಾಕಷ್ಟು ವೈಭವಪೋರಿತ ಕಾರ್ಯಕ್ರಮಗಳು ನಡೆದವು.
ಮಧ್ಯಾಹ್ನದ ವೇಳೆ ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜ ಪೂಜೆ ನೆರವೇರಿಸಿದರು. ಆನಂತರ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆಗೆ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಸಾಗಿದ ಚಿನ್ನದ ಅಂಬಾರಿ ಮೆರವಣಿಗೆ ಸಾಗಿತು. ಸಿಎಂಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್ ಶಿವಕುಮಾರ್ ಸಾಥ್ ನೀಡಿದರು. ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ದಸರೆಗೆ ಮೆರುಗು ನೀಡಿದವು. 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.