ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನ ವಲಯ ಉಸ್ತುವಾರಿ ಅಧಿಕಾರಿಗಳ ಜೊತೆ ಸಚಿವ ಡಾ.ಕೆ.ಸುಧಾಕರ್ ಸಮಾಲೋಚನೆ

admin by admin
July 15, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಮಾಲೋಚನೆ: ಬೂತ್ ಮಟ್ಟದ ಕಾರ್ಯಪಡೆ ರಚನೆ, ತರಬೇತಿ, ಸಮೀಕ್ಷೆಗೆ ಕಾಲಮಿತಿ ನಿಗದಿ

ಬೆಂಗಳೂರು – ಜುಲೈ 15, 2020 : ರಾಜಧಾನಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು ಅದರ ಅನ್ವಯ ಕಾರ್ಯ ನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

ಎರಡು ತಾಸಿಗೂ ಹೆಚ್ಚು ಕಾಲ ಅಧಿಕಾರಗಳ ಜತೆ ವಿಡಿಯೋ ಸಂವಾದದ ಮೂಲಕ ಚರ್ಚಿಸಿ ಮಾಹಿತಿ ಪಡೆದ ಸಚಿವರು, ನಿರ್ದಿಷ್ಟ ಹೊಣೆಗಾರಿಕೆ ವಹಿಸಿಕೊಂಡಿರುವ ಅಧಿಕಾರಿಗಳು ಇತರೆ ಸಹೋದ್ಯೋಗಿಗಳ ಜತೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಲಾಕ್ ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನ ಬೂತ್ ಮಟ್ಟದಲ್ಲಿ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಸಮಿತಿಗಳ ರಚನೆ ತರಬೇತಿ ಪ್ರಕ್ರಿಯೆ ಒಂದೆರಡು ದಿನಗಳಲ್ಲಿ ಮುಗಿಸಬೇಕು. ಆ ನಂತರ ಸಮಿತಿ ಸದಸ್ಯರು ತಮಗೆ ನಿಗದಿಗೊಳಿಸಿರುವ ಬೂತ್ ಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದರು.

ಸಮೀಕ್ಷೆ ವೇಳೆ ಐಎಲ್ ಐ ಮತ್ತು ಸಾರಿ ಪ್ರಕರಣಗಳ ತಪಾಸಣೆ ನಡೆಸಿ ರೋಗ ಲಕ್ಷಣ ಆಧರಿಸಿ ಅವರನ್ನು ಹೋಮ್ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಸಮಿತಿ ಸದಸ್ಯರಿಗೆ ಮಾರ್ಗಸೂಚಿ ಬಗ್ಗೆ ತರಬೇತಿ ಸಮಯದಲ್ಲೇ ಮನವರಿಕೆ ಮಾಡಿಕೊಡಬೇಕು. ಅವರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಒದಗಿಸಬೇಕು. ಆಂಬ್ಯುಲೆನ್ಸ್ ಒದಗಿಸುವುದು ಸಮಿತಿ ಜವಾಬ್ದಾರಿ ಆಗಬೇಕು. ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ ಆಗಬೇಕು ಎಂದು ತಿಳಿಸಿದರು.

ವಲಯವಾರು ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಈ ಎಲ್ಲಾ ಕೆಲಸಗಳ ಮೇಲೆ ನಿಗಾವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಜತೆಗೆ ತಮ್ಮ ವ್ಯಾಪ್ತಿಗೆ ಸೇರಿರುವ ಲ್ಯಾಬ್ ಗಳ ಪರೀಕ್ಷೆ ಮತ್ತು ಕಾರ್ಯ ನಿರ್ವಹಣೆ ಮೇಲೂ ನಿಗಾ ಇಡಬೇಕು. ಒಂದು ವಾರದೊಳಗೆ ಯಾವುದೇ ಸ್ಯಾಂಪಲ್ ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದರ ಸಮನ್ವಯವನ್ನು ಹಿರಿಯ ಅಧಿಕಾರಿ ಶಾಲೀನಿ ರಜನೀಶ್ ಅವರು ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಸೌಲಭ್ಯಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಪಾಸಿಟಿವ್ ಆದವರನ್ನು ಸರ್ಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡುವ ಕೆಲಸ ಆಗಬೇಕು. ಇದಕ್ಕಾಗಿ ಮುಂಬಯಿ ಧಾರಾವಿಯಲ್ಲಿ ಅಳವಡಿಸಿಕೊಂಡಿರುವ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.

ವಲಯವಾರು ಅಗತ್ಯ ವಿರುವ ವಾಹನ ಮತ್ತು ಸಿಬ್ಬಂದಿ ಕೊರತೆಯನ್ನು ಬಿಬಿಎಂಪಿ ಆಯುಕ್ತರು ನಿರ್ವಹಿಸಬೇಕು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಕೊರತೆ ನಿವಾರಿಸುವ ಕೆಲಸವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ನೋಡಿಕೊಳ್ಳಬೇಕು ಎಂದು ಆದೇಶ ನೀಡಿದರು.

Tags: bengaluruCoronaCOVID-19Dr. Sudhakarkarnataka
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram