ಬೆಂಗಳೂರು: ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳ ಪೈಕಿ ಗೃಹ ಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ, ಕೆಲವರು ಈ ಯೋಜನೆಯ ಲಾಭ ಪಡೆಯುತ್ತಿದ್ದರೆ, ಇನ್ನೂ ಕೆಲವರಿಗೆ ಈ ಲಾಭ ಸಿಗುತ್ತಿಲ್ಲ. ಹೀಗಾಗಿ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವೆ ಗುಡ್ ನ್ಯೂಸ್ ನೀಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರತಿ ಜಿಲ್ಲೆಯಿಂದಲೂ ಅವರು ಮಾಹಿತಿ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಸಿಡಿಪಿಒ(CDPO) ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ‘ಆದಷ್ಟು ಬೇಗ ಅರ್ಜಿಯನ್ನು ವಿಲೇವಾರಿ ಮಾಡಲು ಏನು ಸಮಸ್ಯೆ?, ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಸಚಿವರು ಪ್ರಶ್ನಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಗಸ್ಟ್ ನಲ್ಲಿ 1.8 ಕೋಟಿ ಜನ ಮಹಿಳೆಯರು, ಸೆಪ್ಟೆಂಬರ್ ತಿಂಗಳಲ್ಲಿ 1.14 ರಷ್ಟು ಜನ ಈ ಯೋಜನೆಯಡಿ ರಿಜಿಸ್ಟರ್ ಮಾಡಿಕೊಂಡಿದ್ದರೆ, ಅಕ್ಟೋಬರ್ ತಿಂಗಳಲ್ಲಿ 1.16 ರಷ್ಟು ಮಹಿಳೆಯರು ರಿಜಿಸ್ಟರ್ ಮಾಡಿದ್ದಾರೆ. ಆದರೆ, ತಾಂತ್ರಿಕ ಸಮಸ್ಯೆಯಿಂದ ಹಲವರಿಗೆ ಹಣ ಹೋಗಿಲ್ಲ. ಆಧಾರ್ ಲಿಂಕ್ ಆಗದಿರುವುದಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಹೋಗಲಿದೆ ಎಂದು ಸಚಿವರು ಹೇಳಿದ್ದಾರೆ.