ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನೆಲ್ಲೆಯಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯ ಸಚಿವರು ಹೋಮ್ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ತಮ್ಮ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರೆದೆ. ರಾಜ್ಯದಲ್ಲಿ ಪ್ರತಿ ನಿತ್ಯ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.
ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಂಪ್ರತಿ ಕೊರೊನಾ ಸ್ಫೋಟವಾಗುತಿದ್ದು, ಕೋವಿಡ್ ಪಾಸಿಟಿವಿಟಿದರ ಕೂಡ ಹೆಚ್ಚಾಗುತ್ತಿದೆ.
ಇನ್ನು ಆಡಳಿತರೂಢ ಬಿಜೆಪಿಯಲ್ಲಿ ಮೊದಲ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ , ಆರ್ ಅಶೋಕ್ ಅವರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದಾದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಸೋಂಕು ಕಾಣಿಸಿಕೊಂಡಿತ್ತು.