ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್‌ ಮನವಿ

Shwetha by Shwetha
August 17, 2021
in Newsbeat, State, ನ್ಯೂಸ್ ಬೀಟ್, ರಾಜ್ಯ
Sudhakar
Share on FacebookShare on TwitterShare on WhatsappShare on Telegram

ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್‌ ಮನವಿ

ಸಿಎಸ್‌ಆರ್‌ ನಿಧಿಯಡಿ ನೆರವಾಗಲು ಔಷಧ ಕಂಪನಿಗಳಿಗೆ ಕರೆ

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಬೆಂಗಳೂರು : ಔಷಧ ವಲಯದ ಉದ್ದಿಮೆಗಳು ತಮ್ಮ ಸಾಂಸ್ಥಿಕ ಹೊಣೆಗಾರಿಕೆ ನಿಧಿಯನ್ನು ಲಸಿಕಾ ಆಂದೋಲನಕ್ಕೆ ದೇಣಿಗೆ ನೀಡುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಶೇಕಡಾ ಎಪ್ಪತ್ತೈದರಷ್ಟು ಲಸಿಕೆಯನ್ನು ರಾಜ್ಯಕ್ಕೆ ಉಚಿತವಾಗಿ ನೀಡುತ್ತಿದೆ. ಉಳಿದ ಇಪ್ಪತ್ತೈದರಷ್ಟನ್ನು ಖಾಸಗಿ ವಲಯಕ್ಕೆ ಹಂಚಿಕೆ ಮಾಡಿದೆ. ಖಾಸಗಿ ವಲಯಕ್ಕೆ ನೀಡಿರುವ ಲಸಿಕೆಯನ್ನು ಸಿಎಸ್‌ಆರ್‌ ನಿಧಿಯಡಿ ಖರೀದಿಸಿ ದೇಣಿಗೆ ರೂಪದಲ್ಲಿ ನೀಡುವಂತೆ ರಾಜ್ಯದ ಪ್ರಮುಖ ಔಷಧ ಉದ್ದಿಮೆದಾರರ ಸಭೆಯಲ್ಲಿ ಮಂಗಳವಾರ ಕರೆ ನೀಡಿದರು.
Sudhakar
ತಜ್ಞರ ಅಭಿಪ್ರಾಯದ ಪ್ರಕಾರ ಮೂರನೇ ಅಲೆ ಅಷ್ಟೇನು ಪರಿಣಾಮಕಾರಿ ಅಲ್ಲ ಎನ್ನಲಾಗುತ್ತಿದೆ. ಆದರೂ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಎರಡು ಡೋಸ್‌ ಲಸಿಕೆ ಪಡೆದವರಿಗೆ ಸೋಂಕು ತೀವ್ರ ಪರಿಣಾಮ ಬೀರುವುದಿಲ್ಲ ಮತ್ತು ಸಾವು ಸಂಭವಿಸುವುದಿಲ್ಲ ಎಂಬುದು ರುಜುವಾತಾಗಿದೆ. ಹೀಗಾಗಿ ತ್ವರಿತವಾಗಿ ಲಸಿಕೆ ನೀಡುವುದರಿಂದ ಸಂಭವನೀಯ ಮೂರನೇ ಅಲೆಯಿಂದ ಸಂರಕ್ಷಣೆ ಸಾಧ್ಯ. ಹೀಗಾಗಿ ಸರ್ಕಾರದ ಜತೆ ಉದ್ದಿಮೆಗಳು ಕೈ ಜೋಡಿಸಿದರೆ ಗುರಿ ಸಾಧ್ಯ ಎಂದರು.

ಔಷಧ ವಲಯ ಮಾತ್ರವಲ್ಲದೆ, ಪೌಷ್ಟಿಕ ಆಹಾರ ಮತ್ತು ಸೌಂದರ್ಯ ವರ್ದಕ ಉದ್ದಿಮೆದಾರರ ಜತೆಗೂ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಸಿಎಸ್‌ಆರ್‌ ನಿಧಿಯ ನೆರವನ್ನು ಲಸಿಕಾ ಆಂದೋನಕ್ಕೂ ವಿಸ್ತರಿಸಲು ಮನವಿ ಮಾಡಲಾಗುವುದು. ಇದು ಸರ್ಕಾರ ಮಾತ್ರವಲ್ಲದೆ, ಸಮಾಜದ ಎಲ್ಲರ ಹೊಣೆಗಾರಿಕೆ ಆಗಿರುವುದರಿಂದ ಉದ್ದಿಮೆಗಳು ನೆರವಿನ ಹಸ್ತ ಚಾಚಬೇಕು ಎಂದು ಸಚಿವರು ಮನವಿ ಮಾಡಿದರು.
ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉದ್ದಿಮೆ ಪ್ರತಿನಿಧಿಗಳು, ಔಷಧ ವಲಯದ ಸಂಘಟನೆ ಮೂಲಕ ಮತ್ತು ತಮ್ಮ ಉದ್ದಿಮೆಗಳ ಮೂಲಕ ಸರ್ಕಾರದ ಲಸಿಕಾ ಆಂದೋಲನಕ್ಕೆ ನೆರವಾಗುವುದಾಗಿ ಭರವಸೆ ನೀಡಿದರು. ಸರ್ಕಾರದ ಸಂದೇಶವನ್ನು ತಮ್ಮ ಕಂಪನಿಗಳ ಆಡಳಿತ ಮಂಡಳಿಗೆ ತಿಳಿಸಿ ಆದಷ್ಟು ಬೇಗ ಪ್ರತಿಕ್ರಿಯೆ ನೀಡುವುದಾಗಿ ಸಭೆಯಲ್ಲಿ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಉದ್ದಿಮೆ ಹೊಂದಿರುವ ಮುವತ್ತಕ್ಕೂ ಹೆಚ್ಚು ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಆಕ್ಸಿಜನ್‌ ಕೊರತೆ ನಿವಾರಣೆಗೆ ಕ್ರಮ

ಸಂಭವನೀಯ ಮೂರನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್‌ ಕೊರತೆ ಎದುರಾಗದಂತೆ ಉದ್ಯಮಗಳ ಜತೆ ಸರ್ಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಲಿದೆ ಎಂದು ಇದಕ್ಕೂ ಮೊದಲು ಆಕ್ಸಿಜನ್‌ ಉತ್ಪಾದಕ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಸಚಿವ ಸುಧಾಕರ್‌ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಆಕ್ಸಿಜನ್‌ ಸರಬರಾಜು ಕುರಿತಂತೆ ಉದ್ಯಮದ ಪ್ರತಿನಿಧಿಗಳ ಸಭೆ ನಡೆಸಿದ ಸಚಿವರು, ಉದ್ಯಮಗಳ ಸಹಕಾರದೊಂದಿಗೆ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಸಂಭವನೀಯ ಮೂರನೇ ಅಲೆಯಲ್ಲೂ ಜನರ ಹಿತದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದರು.
Sudhakar
ಪ್ರಸ್ತುತ ಒಟ್ಟು ಏಳು ಕಂಪನಿಗಳು ೮೧೨ ಟನ್‌ಗಳಷ್ಟನ್ನು ಪ್ರತಿದಿನ ಉತ್ಪಾದಿಸುತ್ತಿವೆ. ನಮ್ಮಲ್ಲಿ ಒಟ್ಟು ೭೯೦೦ ಟನ್‌ಗಳಷ್ಟಿದೆ. ಸದ್ಯ ೫೩೮೧ ಟನ್‌ ಪ್ರಮಾಣದ ದಾಸ್ತಾನು ಇದೆ. ಆಕ್ಸಿಜನ್‌ ರೀಫಿಲಿಂಗ್‌ ಘಟಕಗಳು ೬೪ ಇವೆ. ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್‌, ಯಾದಗಿರಿ, ಚಾಮರಾಜನಗರ, ಕೊಡಗು ಮತ್ತು ಮಂಡ್ಯಗಳಲ್ಲಿ ಇಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕು ಮತ್ತು ಜಿಲ್ಲೆಗಳಲ್ಲಿ ಆಕ್ಸಿಜನ್‌ ಘಟಕಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಹಿಂದಿನ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಲಾಗುವುದು. ಹೊಸ ಘಟಕಗಳ ಸ್ಥಾಪನೆ, ಟೆಂಡರ್‌ ಕರೆಯುವುದು, ಜಂಬೋ ಸಿಲೆಂಡರ್‌ ಖರೀದಿ, ಹೆಚ್ಚುವರಿ ದಾಸ್ತಾನು ಕೇಂದ್ರ, ಸರಬರಾಜು ವ್ಯವಸ್ಥೆ ಸಹಿತ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಕಂಪನಿಗಳು ತಮ್ಮ ಉತ್ಪಾದನೆ, ದಾಸ್ತಾನು ವ್ಯವಸ್ಥೆಗಳನ್ನು ಬಲವರ್ದನೆಗೊಳಿಸಿಕೊಳ್ಳಬೇಕು. ಸರ್ಕಾರದಿಂದ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಹಿರಿಯ ಅಧಿಕಾರಿಗಳಾದ ಮನೀಷ್‌ ಮುದ್ಗಿಲ್‌, ಶಾಲಿನಿ ರಜನೀಶ್‌, ಉದ್ದಿಮೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
————————

Tags: vaccine
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram