ಬೆಂಗಳೂರು : ಕೊರೊನಾ ಸೋಂಕಿತರೊಬ್ಬರಿಗೆ ಚಿಕಿತ್ಸೆ ನೀಡಿ 5 ಲಕ್ಷ ಬಿಲ್ ಮಾಡಿರುವ ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಮುಂದಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದು ಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವಿ’ ಎಂದು ತಿಳಿಸಿದ್ದಾರೆ.
https://twitter.com/mla_sudhakar/status/1288340543420788737?s=20
“ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು” ಎಂದು ಬರೆದುಕೊಂಡಿದ್ದಾರೆ.








