ರಾಜ್ಯದಲ್ಲಿನ ಸದದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊAಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ೧೦ ಲಕ್ಷಕ್ಕೂ ಅಧಿಕ ಕೊರೊನಾ ವೈದ್ಯಕೀಯ ಟೆಸ್ಟ್ ನಡೆಸಲಾಗಿದೆ. ಸುಮಾರು ೮೮ ಲ್ಯಾಬ್ಸ್ ಗಳಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷಾ ಸಂಖ್ಯೆ ೧೦, ೨೦, ೮೩೦ ದಾಟಿದೆ. ಅದರಲ್ಲಿ ಇಂದು ೩೫ ಸಾವಿರದ ೮೩೪ ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇನ್ನೂ ಇಂದು ರಾಜ್ಯದಲ್ಲಿ ೪೧೨೦ ಕೋವಿಡ್ ಪಾಸಿಟಿವ್ ಕೇಸ್ ಗಳು ದಾಖಲಾಗಿದ್ದು, ಗುಣಮುಖರಾದವರ ಸಂಖ್ಯೆ ೧,೨೯೦ ಇದೆ. ಬೆಂಗಳೂರಿನನೊAದರಲ್ಲೇ ೨೧೫೬ ಕೇಸ್ಗಳಿದ್ದು, ೨೫೩ ಜನರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಸುದಾಕರ್ ಅವರು ತಿಳಿಸಿದ್ದಾರೆ.
ದಿನೇ ದಿನೇ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಾಡಾಗಿದೆ. ಇತ್ತ ಕೊರೊನಾ ಬಿಕ್ಕಟ್ಟಿನಿಂದಾಗಿ ಬೆಂಗಳೂರು ರಾಜ್ಯದ ಜನ ಕಂಗಾಲಾಗಿದ್ದು ಆತಂಕಕ್ಕೆ ಒಳಗಾಗಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








