ಅಮರಾವತಿ: ದುಷ್ಕರ್ಮಿಗಳು ದಲಿತ ವ್ಯಕ್ತಿಯ (Dalit Youth) ಮೇಲೆ ಹಲ್ಲೆ ನಡೆಸಿ, ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಘಟನೆಯೊಂದು ನಡೆದಿದೆ.
6 ಜನರ ಗುಂಪೊಂದು ಹಲ್ಲೆ ನಡೆಸಿ, ನೀರು ಕೇಳಿದಾಗ ಮೂತ್ರ ವಿಸರ್ಜಿಸಿರುವ (Urinate) ಅಮಾನವೀಯ ಕೃತ್ಯ ಆಂಧ್ರಪ್ರದೇಶದ (Andhra Pradesh) ಎನ್ಟಿಆರ್ (NTR) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶ್ಯಾಮ್ ಕುಮಾರ್ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸತತ ನಾಲ್ಕು ಗಂಟೆಗಳ ಕಾಲ ಥಳಿಸಿ, ನೀರು ಕೇಳಿದಾಗ ಮೂತ್ರ ವಿಸರ್ಜನೆ ಮಾಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.