ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಿಥಾಲಿ ರಾಜ್ – ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ  ಮಹಿಳಾ ಕ್ರಿಕೆಟ್ ತಂಡದ ನಾಯಕಿ

Naveen Kumar B C by Naveen Kumar B C
June 8, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಮಿಥಾಲಿ ರಾಜ್ – ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ  ಮಹಿಳಾ ಕ್ರಿಕೆಟ್ ತಂಡದ ನಾಯಕಿ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ವಿದಾಯ ಘೋಷಿಸಿದ್ದಾರೆ.  ಟ್ವೀಟ್ ಮೂಲಕ ಈ ಮಾಹಿತಿ ನೀಡಿರುವ ಮಿಥಾಲಿ ರಾಜ್ ಎಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಹೇಳಿದ್ದಾರೆ.  ತನ್ನ ಎರಡನೇ ಇನ್ನಿಂಗ್ಸ್‌ನತ್ತ ಗಮನ ಹರಿಸುವುದಾಗಿ ಬರೆದುಕೊಂಡಿದ್ದಾರೆ.  ಆದರೆ, ಈ ಎರಡನೇ ಇನ್ನಿಂಗ್ಸ್ ಏನೆಂಬುದನ್ನು ಅವರು ಇನ್ನೂ ಬಹಿರಂಗಪಡಿಸಿಲ್ಲ.

23 ವರ್ಷಗಳ ವೃತ್ತಿಜೀವನಕ್ಕೆ ವಿದಾಯ

ಮಿಥಾಲಿ ರಾಜ್ 26 ಜೂನ್ 1999 ರಂದು ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಕಳೆದ 23 ವರ್ಷಗಳಿಂದ ಭಾರತ ತಂಡದಲ್ಲಿ ಆಡುತ್ತಿದ್ದರು. 39ರ ಹರೆಯದ ಮಿಥಾಲಿ ಟೀಂ ಇಂಡಿಯಾ ಪರ 10 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅವರು 2000 ರಲ್ಲಿ ಭಾರತಕ್ಕಾಗಿ ಮೊದಲ ವಿಶ್ವಕಪ್ ಆಡಿದರು. ಇದಾದ ಬಳಿಕ 2005, 2009, 2013, 2017 ಮತ್ತು 2022ರಲ್ಲಿ ಟೀಂ ಇಂಡಿಯಾ ಪರ ಮೈದಾನಕ್ಕಿಳಿದಿದ್ದರು.

ಮಿಥಾಲಿ ರಾಜ್ ಹೊರತುಪಡಿಸಿ, ಸಚಿನ್ ತೆಂಡೂಲ್ಕರ್ ಭಾರತಕ್ಕೆ ಆರು ವಿಶ್ವಕಪ್‌ಗಳನ್ನು ಆಡಿದ ಏಕೈಕ ಕ್ರಿಕೆಟಿಗರಾಗಿದ್ದಾರೆ. ಸಚಿನ್ 1992 ರಿಂದ 2011 ರವರೆಗೆ ಆರು ವಿಶ್ವಕಪ್‌ಗಳನ್ನು ಭಾರತಕ್ಕಾಗಿ ಆಡಿದರು ಮತ್ತು ಅವರ ಕೊನೆಯ ವಿಶ್ವಕಪ್ ನಲ್ಲಿ ಕಪ್ ತಮ್ಮದಾಗಿಸಿಕೊಂಡಿದ್ದರು. 38 ವರ್ಷದ ಮಿಥಾಲಿ ರಾಜ್ ಅವರನ್ನು ಮಹಿಳಾ ಕ್ರಿಕೆಟ್‌ನ ಸಚಿನ್ ಎಂದು ಕರೆಯಲಾಗುತ್ತದೆ.

ಟ್ವೀಟ್ ಜೊತೆ ಭಾವನಾತ್ಮಕ  ಪತ್ರ ಹಂಚಿಕೊಂಡ ಮಿಥಾಲಿ

ನಿವೃತ್ತಿಯ ನಂತರ ಮಿಥಾಲಿ ರಾಜ್ ಪತ್ರವೊಂದನ್ನು ಟ್ವೀಟ್ ಮೂಲಕ ಶೇರ್ ಮಾಡಿದ್ದಾರೆ.  “ನಾನು ಚಿಕ್ಕ ಹುಡುಗಿಯಾಗಿ ಭಾರತೀಯ ನೀಲಿ ಜೆರ್ಸಿಯನ್ನು ಧರಿಸಲು ಪ್ರಾರಂಭಿಸಿದೆ.  ಇದು ನನ್ನ ದೇಶವನ್ನು ಪ್ರತಿನಿಧಿಸುವ ದೊಡ್ಡ ಗೌರವವಾಗಿದೆ. ಈ ಪ್ರಯಾಣದಲ್ಲಿ ನಾನು ಒಳ್ಳೆಯದು ಮತ್ತು ಕೆಟ್ಟದ್ದನ್ನು ನೋಡಿದೆ. ಪ್ರತಿಯೊಂದು ಘಟನೆಯೂ ನನಗೆ ಹೊಸದನ್ನು ಕಲಿಸಿದೆ. ಈ 23 ವರ್ಷಗಳು ನನಗೆ ಅತ್ಯಂತ ಸವಾಲಿನ, ಆನಂದದಾಯಕ ಮತ್ತು ತೃಪ್ತಿಕರವಾಗಿವೆ. ಎಲ್ಲ ಪಯಣಗಳಂತೆ ಇದೂ ಕೂಡ ಕೊನೆಯಾಗಬೇಕಿತ್ತು. ನಾನು ಇಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಂದ ನಿವೃತ್ತಿಯಾಗುತ್ತಿದ್ದೇನೆ.

ಇನ್ನು ಮೈದಾನಕ್ಕೆ ಕಾಲಿಟ್ಟಾಗಲೆಲ್ಲ ನನ್ನ ಅತ್ಯುತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ. ಭಾರತವನ್ನು ಗೆಲ್ಲಲಿಸುವುದೇ ನನ್ನ ಉದ್ದೇಶವಾಗಿತ್ತು. ತ್ರಿವರ್ಣ ಧ್ವಜವನ್ನು ಪ್ರತಿನಿಧಿಸಲು ನನಗೆ ಸಿಗುವ ಪ್ರತಿಯೊಂದು ಅವಕಾಶವನ್ನು ನಾನು ಗೌರವಿಸುತ್ತೇನೆ. ನನ್ನ ವೃತ್ತಿಜೀವನವನ್ನು ಕೊನೆಗೊಳಿಸಲು ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಭಾರತ ತಂಡ ಅರ್ಹ ಮತ್ತು ಪ್ರತಿಭಾವಂತ ಯುವ ಆಟಗಾರರ ಕೈಯಲ್ಲಿದೆ. ಭಾರತೀಯ ಕ್ರಿಕೆಟ್ ಭವಿಷ್ಯ ಬಂಗಾರವಾಗಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಮತ್ತು ನಾಯಕಿಯಾಗಿ ನನಗೆ ದೊರೆತ ಬೆಂಬಲಕ್ಕಾಗಿ ನಾನು ಬಿಸಿಸಿಐ ಮತ್ತು ಶ್ರೀ ಜಯ್ ಶಾ ಸರ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಇಷ್ಟು ವರ್ಷಗಳ ಕಾಲ ಭಾರತ ತಂಡದ ನಾಯಕತ್ವ ವಹಿಸಿರುವುದು ನನಗೆ ಗೌರವವಾಗಿದೆ. ಇದು ನನ್ನನ್ನು ಉತ್ತಮ ವ್ಯಕ್ತಿಯಾಗಿ ರೂಪಿಸಿದೆ. ಈ ಅವಧಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ಕೂಡ ಉತ್ತಮ ಆಕಾರವನ್ನು ಪಡೆದುಕೊಂಡಿದೆ ಎಂದು ನಾನು ಭಾವಿಸುತ್ತೇನೆ. ಈ ಪ್ರಯಾಣವು ಇಲ್ಲಿಗೆ ಕೊನೆಗೊಳ್ಳುತ್ತದೆ ಆದರೆ ಹೊಸದು ಪ್ರಾರಂಭವಾಗುತ್ತದೆ. ನಾನು ಈ ಆಟದಲ್ಲಿ ಉಳಿಯಲು ಬಯಸುತ್ತೇನೆ. ನಾನು ಈ ಆಟವನ್ನು ಇಷ್ಟಪಡುತ್ತೇನೆ. ಭಾರತ ಮತ್ತು ಪ್ರಪಂಚದಾದ್ಯಂತ ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ಕೊಡುಗೆ ನೀಡಲು ನಾನು ಸಂತೋಷಪಡುತ್ತೇನೆ. ನನ್ನ ಎಲ್ಲಾ ಅಭಿಮಾನಿಗಳಿಗೆ ತುಂಬಾ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು.’ ಎಂದು ಪತ್ರ ಬರೆದಿದ್ದಾರೆ.

Tags: Mithali Rajretirement
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram