ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾನೂನು ತಜ್ಞ ಎಂ.ಕೆ.ವಿಜಯ್ ಕುಮಾರ್ ಅವರಿಗೆ ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Shwetha by Shwetha
October 30, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Kannada Rajyotsava udupi
Share on FacebookShare on TwitterShare on WhatsappShare on Telegram

ಕಾನೂನು ತಜ್ಞ ಎಂ.ಕೆ.ವಿಜಯ್ ಕುಮಾರ್ ಅವರಿಗೆ ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ    Kannada Rajyotsava udupi

ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯು ಕಾರ್ಕಳದ ಖ್ಯಾತ ವಕೀಲ ಎಂ.ಕೆ.ವಿಜಯ್ ಕುಮಾರ್ ಸೇರಿದಂತೆ 65 ಮಂದಿ ಸಾಧಕರನ್ನು ಅರಸಿ ಬಂದಿವೆ.   Kannada Rajyotsava udupi

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

Kannada Rajyotsava udupi
ಸಾಮಾಜಿಕ ತುಡಿತ, ಕ್ರಿಯಾಶೀಲತೆ, ಪರಿಶ್ರಮಗಳ ಸಾಕಾರ ಮೂರ್ತಿ ಎಂ.‌ ಕೆ. ವಿಜಯ್ ಕುಮಾರ್ ಮೈಸೂರು ಮಹಾರಾಜರಿಂದ ಮಹಾ ಆಸ್ಥಾನ ವಿದ್ವಾನ್ ಬಿರುದು ಪಡೆದ ದಿ. ಸುಬ್ಬಯ್ಯ ಶಾಸ್ತ್ರಿ ದಿ. ಎಂ.ಕೆ. ಲಕ್ಷ್ಮಿ ಮತಿ ಅಮ್ಮನವರ ಆರನೆಯ ಸುಪುತ್ರರು.

ತಾರುಣ್ಯದಲ್ಲೇ ತಮ್ಮ ಪ್ರಖರವಾದ ಮಾತುಗಾರಿಕೆಯಿಂದ ಗುರುತಿಸಲ್ಪಟ್ಟಿದ ಇವರು ತಮ್ಮ ಕನಸಿನ ವಕೀಲ ವೃತ್ತಿಯನ್ನು ಕೈಗೊಂಡರು. ‌ಅವರ ಸಾಹಿತ್ಯಿಕ, ಸಾಂಸ್ಕೃತಿಕ ಪರಿಸರ ಅವರನ್ನು ಜನಪರ ಚಿಂತನೆಯ ಯುವ ನಾಯಕನಾಗಿ ಬೆಳೆಸಿತು.

1967ರಲ್ಲಿ ವಕೀಲಿ ವೃತ್ತಿ ಪ್ರಾರಂಭಿಸಿದ ಇವರು ವೃತ್ತಿರಂಗದಲ್ಲಿ ಯುವ ವಕೀಲರಿಗೆ ಮಾದರಿಯಾಗಿ ಗುರುತಿಸಲ್ಪಟ್ಟವರು.
ವಕೀಲ ವೃತ್ತಿಯನ್ನು ಉದ್ಯೋಗವೆಂದು ಭಾವಿಸದೆ ಸಮಾಜ ಸೇವೆಗೆ‌ ತನಗೆ‌ ಭಗವಂತ ಕಲ್ಪಿಸಿದ ಅವಕಾಶವೆಂದೇ ತಿಳಿದವರು. ನ್ಯಾಯದ ಪರವಾಗಿ, ಅಸಹಾಯಕರು, ಆರ್ಥಿಕವಾಗಿ ನೊಂದವರ ಪರವಾಗಿ ನಿಂತು ಉಚಿತವಾಗಿ ಕಾನೂನಿನ ನೆರವು ನೀಡಿದವರು.

1973ರಲ್ಲಿ ಜನಸಂಘ ಪಕ್ಷದ ಕಾರ್ಯಕರ್ತನಾಗಿ ಗುರುತಿಸಿ ಕೊಂಡ ಇವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಮುನ್ನುಗ್ಗಿದರು. 1978ರಲ್ಲಿ ಜನತಾ ಪಕ್ಷದ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಗೊಂಡರು.‌ ಜನತಾ ಪಕ್ಷ ಭಾರತೀಯ ಜನತಾ ಪಕ್ಷವಾದಾಗ ಮತ್ತೊಮ್ಮೆ ಕಾರ್ಕಳದ ವಿಧಾನ ಸಭೆಗೆ ಅಭ್ಯರ್ಥಿಯಾಗಿ ಆಯ್ಕೆಯಾದರೂ ಅಲ್ಪ ಅಂತರದಿಂದ ‌ಶ್ರೀ ವೀರಪ್ಪ ಮೊಯಿಲಿ ಯವರ ಎದುರು ಸೋತರೂ ರಾಜ್ಯದಲ್ಲಿ ಅತ್ಯಧಿಕ ಮತ ಪಡೆದ ಮೂರನೆಯ ಅಭ್ಯರ್ಥಿಯಾಗಿದ್ದರು.

ಇವರ ಕೈಕೆಳಗೆ ಅಸಂಖ್ಯಾತ ಕಿರಿಯ ವಕೀಲರು, ತರಬೇತು ಪಡೆದಿದ್ದು, ಅವರ ಶಿಷ್ಯರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನಿಯುಕ್ತಿ ಹೊಂದಿದ್ದಾರೆ ಮಾತ್ರವಲ್ಲ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾಗಿ ಇತ್ತೀಚೆಗೆ ನೇಮಕಗೊಂಡ ಜಸ್ಟೀಸ್ ಅಬ್ದುಲ್ ನಜೀರ್ ವರು ಇವರ ಶಿಷ್ಯರು. ಇವರು ಅವಿಭಜಿತ ದ.ಕ ಜಿಲ್ಲಾ ಬಾರ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ತಮ್ಮ ಕಾರ್ಯ ವೈಖರಿಯಿಂದ ಸರ್ವರ ಅಭಿಮಾನಕ್ಕೆ ಪಾತ್ರರಾದವರು.

Kannada Rajyotsava udupi
ಸಾಹಿತ್ಯ ಪ್ರಿಯರಾದ ಇವರ ಮಾರ್ಗದರ್ಶನ, ನೇತೃತ್ವದಲ್ಲಿ ತಾಲ್ಲೂಕು, ಜಿಲ್ಲಾ, ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳು ನಡೆದಿದೆ. ಸಾಹಿತ್ಯ ಸೇವೆಗೆ ತನ್ನನ್ನೇ ಮುಡಿಪಾಗಿಟ್ಟುಕೊಂಡ ಇವರ ಸಾರಥ್ಯ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಕಾರಣ.‌ ಅನೇಕ ವಿಚಾರಗೋಷ್ಠಿ, ಕಾರ್ಯಗಾರಗಳಲ್ಲಿ ಪ್ರಬಂಧ ಮಂಡನೆ ಮಾಡಿ ಜನ ಮೆಚ್ಚುಗೆ ಗಳಿಸಿದ ಹೆಗ್ಗಳಿಕೆ ಇವರದು. ಪ್ರಕಾಂಡ ಪಂಡಿತರಾದ ಇವರ ನಿರರ್ಗಳ ವಾಗ್ವೈಕರಿ ಸಭಿಕರನ್ನು ಮಂತ್ರ ಮುಗ್ದವಾಗಿಸುವಂತಹದ್ದು. ಸಾಹಿತ್ಯ ಸೇವೆಗೆ ತನ್ನನ್ನೇ ಮುಡಿಪಾಗಿಟ್ಟುಕೊಂಡ ಇವರು ತುಳುನಾಡಿನ ಕಂಬಳ ಕ್ರೀಡೆಯು ಪ್ರೋತ್ಸಾಹಕರು. ಅನೇಕ ಶಿಕ್ಷಣ ಸಂಸ್ಥೆಗಳ ರೂವಾರಿಯಾಗಿ ಆ ಮೂಲಕ ಶಿಕ್ಷಣ ಕ್ರಾಂತಿಗೆ ಕೈಜೋಡಿಸಿದವರು.

ಕಾರ್ಕಳದ ಬಾಹುಬಲಿಯ ಮಸ್ತಕಾಭಿಷೇಕದ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿ ದೇಶದಾದ್ಯಂತ ಮೆಚ್ಚುಗೆಗೆ ಪಾತ್ರರಾದವರು.
1977ರಲ್ಲಿ ಪ್ರಿಯಾಕಾರಿಣಿಯನ್ನು ಮದುವೆಯಾದ ಇವರು ಎಂ.ಕೆ ಸುವೃತ ಕುಮಾರ್ ಮತ್ತು ವಿಪುಲ ತೇಜರೆಂಬ ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ನಡೆಸುತ್ತಿದ್ದಾರೆ.
ಸರಳ ಸಜ್ಜನರಾದ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರದಲ್ಲಿ ಅವರು ಸಾಧಿಸಿರುವ ಸಾಧನೆಗೆ ಅವರ ಕ್ರಿಯಾಶೀಲತೆಗೆ ಸಂದ ಗೌರವ

ಶ್ರೀಮತಿ ಮಿತ್ರಪ್ರಭ ಹೆಗ್ಡೆ
ಅಧ್ಯಕ್ಷರು
ಅ.ಭಾ ಸಾ.ಪರಿಷತ್ತು. ಕಾರ್ಕಳ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: citizens of KarnatakaKannada Rajyotsava awardkarnatakaMK Vijay Kumarsecond-highest civilian honourUdupi
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram