ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಟಾರ್ಗೆಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರದಲ್ಲಿ ಕೊಟ್ಟಿದ್ದ ಅನುದಾನವನ್ನು ಸರ್ಕಾರ ಹಿಂಪಡೆದಿದೆ ಎಂದು ಆರೋಪಿಸಿ, ಮುನಿರತ್ನ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ನಡೆಸುತ್ತಿದ್ದಾರೆ.
ಅಲ್ಲದೇ ಆರ್.ಆರ್ ನಗರ ಕ್ಷೇತ್ರದ 126 ಕೋಟಿ ಅನುದಾನ ವಾಪಸ್ಗೆ ಮುನಿರತ್ನ ಆಗ್ರಹಿಸಿದ್ದಾರೆ. ಮುನಿರತ್ನ ಹೋರಾಟಕ್ಕೆ ನಗರ ಬಿಜೆಪಿ ಶಾಸಕರ ಬೆಂಬಲವೂ ಇದೆ. ಇದು ಕಾಂಗ್ರೆಸ್ – ಬಿಜೆಪಿ ನಡುವಿನ ಮತ್ತೊಂದು ವಾರ್ ಎನ್ನಲಾಗಿದೆ.