ಸಚಿವ ಸ್ಥಾನ ಕೊಟ್ರೆ ನಿಭಾಯಿಸಲು ಸಿದ್ಧ : ಎನ್.ಮಹೇಶ್ MLA N. Mahesh
ಚಾಮರಾಜನಗರ : ಸಚಿವ ಸ್ಥಾನ ಕೊಟ್ಟರೇ ನಿಭಾಯಿಸಲು ಸಿದ್ಧ ಎಂದು ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಆತಂಕದ ಮಧ್ಯೆ ಸರ್ಕಾರದಲ್ಲಿ ಸಂಪುಟ ಪುನಾರಚನೆ ಚರ್ಚೆ ನಡೆಯುತ್ತಿದೆ.
ಸಚಿವ ಸ್ಥಾನಕ್ಕಾಗಿ ಗುಪ್ತ್ ಗುಪ್ತ್ ಕಸರತ್ತು ನಡೆಯುತ್ತಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ.
ಈ ಮಧ್ಯೆ ಸಚಿವ ಸ್ಥಾನದ ಬಗ್ಗೆ ಎನ್. ಮಹೇಶ್ ಪ್ರತಿಕ್ರಿಯೆ ನೀಡಿದ್ದು, ಸಚಿವ ಸ್ಥಾನ ಕೊಟ್ರೆ ನಿಭಾಯಿಸಲು ಸಿದ್ಧನಿದ್ದೇನೆ.
ಈಗಾಗಲೇ ನನಗೆ ಸಚಿವ ಸ್ಥಾನ ಕೊಡ್ತಾರೆಂದು ಎಲ್ಲೆಡೆ ಚರ್ಚೆ ಆಗ್ತಿದೆ.
ಒಂದು ವೇಳೆ ಸಿಎಂ, ಪಕ್ಷ ಸಚಿವ ಸ್ಥಾನ ಕೊಟ್ರೆ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಮಹೇಶ್ ತಿಳಿಸಿದ್ದಾರೆ.
ಇನ್ನು ನಾನು ಸಚಿವನಾದರೇ ಕ್ಷೇತ್ರದ ಅಭಿವೃದ್ಧಿ ಜೊತೆಗೆ ರಾಜ್ಯದ ಅಭಿವೃದ್ಧಿಗೆ ದುಡಿಯುತ್ತೇನೆ.
ನಾನು ಯಾರ ಬಳಿಯೂ ಹೋಗಿ ಸಚಿವ ಸ್ಥಾನ ಕೊಡಿ ಅಂತಾ ಕೇಳಿಲ್ಲ. ಒಂದು ವೇಳೆ ಸಚಿವ ಸ್ಥಾನ ಸಿಕ್ಕಿದ್ರೆ ಸಂತೋಷ ಎಂದು ಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.