ಸಂಸದೆ ಸುಮಲತಾ ಅಂಬರೀಶ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ಗರಂ
ಮಂಡ್ಯ: ರೈಲ್ವೆ ಯೋಜನೆಗೆ ದಕ್ಷಿಣ ಭಾರತಕ್ಕೆ 55 ಕೋಟಿ ಬಿಡುಗಡೆಯಾಗಿದೆ. ಉತ್ತರ ಭಾರತಕ್ಕೆ 13 ಸಾವಿರ ಕೋಟಿ ಬಿಡುಗಡೆಯಾಗಿದೆ. ಸಂಸದರಾಗಿ ನೀವು ಏನು ಮಾಡುತ್ತಿದ್ದೀರಾ? ಎಂದು ಸಂಸದೆ ಸಮಲತಾ ಅಂಬರೀಶ್ ಅವರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಸಂಸದರಾಗಿ ಏನು ಮಾಡಬೇಕು ಎಂಬ ಜವಬ್ದಾರಿಯ ಅರಿವಿಲ್ಲ. ಶಾಸಕರಿಗೆ ಸಂಸದರಿಗೆ ಸಾಮಾನ್ಯವಾಗಿ ಅನುದಾನ ಬರುತ್ತದೆ. ಅದನ್ನು ಬಿಟ್ಟು ಬೇರೆ ಮಂಡ್ಯಕ್ಕೆ ಹೊಸದಾಗಿ ಯಾವ ಅನುದಾನ ತಂದಿದ್ದೀರಾ ಮೊದಲು ಹೇಳಿ. ನಾನು ಅನುದಾನ ತಂದಿದ್ದೇನೆ. ಬೇಕು ಅಂದರೆ ಲೆಕ್ಕ ಕೊಡುತ್ತೇನೆ. ಆದರೆ ನೀವೇನು ಅನುದಾನ ತಂದಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.
ರೈಲ್ವೆ ಯೋಜನೆಗೆ ದಕ್ಷಿಣ ಭಾರತಕ್ಕೆ 55 ಕೋಟಿ ಬಿಡುಗಡೆಯಾಗಿದೆ. ಉತ್ತರ ಭಾರತಕ್ಕೆ 13 ಸಾವಿರ ಕೋಟಿ ಬಿಡುಗಡೆಯಾಗಿದೆ. ಸಂಸದರಾಗಿ ನೀವು ಏನು ಮಾಡುತ್ತಿದ್ದೀರಾ? ಇವರಿಗೆ ಇವರ ಜವಾಬ್ದಾರಿಯ ಅರಿವಿಲ್ಲ. ಕೆ.ಆರ್. ನಗರದಲ್ಲಿ ಸ್ಟೇಟ್ ಫಂಡ್ ಕಾಮಗಾರಿಗೆ ಪೂಜೆ ಮಾಡುವುಕ್ಕೆ ಹೋಗುತ್ತಾರೆ. ಅದರಲ್ಲೂ ಎಂಎಲ್ಎ ಬಿಟ್ಟು ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.