ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ಆರ್.ಅಶೋಕ್ ಗೆ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಕನಕಪುರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪಕ್ಷದ ಆದೇಶದ ಹಿನ್ನೆಲೆಯಲ್ಲಿ ಅವರು ಸ್ಪರ್ಧೆ ಮಾಡಿದ್ದಾರೆ. ಮೋದಿ ಅವರ ಠಕ್ಕರ್ ಆಗಲಿ, ಅಮಿತ್ ಶಾ ಅವರ ಠಕ್ಕರ್ ಆಗಲಿ ನಮ್ಮ ಮುಂದೆ ನಡೆಯುವುದಿಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನರು ಎಲ್ಲರನ್ನೂ ನೋಡಿದ್ದಾರೆ. ಇಂತಹ ಮಹಾನ್ ನಾಯಕರನ್ನು ನಾವು ಕೂಡ ನೋಡಿದ್ದೇವೆ. ಮೇ. 10ಕ್ಕೆ ನಮ್ಮ ಜನರ ಉತ್ತರ ತಿಳಿಯಲಿದೆ ಎಂದು ಹೇಳಿದ್ದಾರೆ.
ಜನ ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿದ್ದಾರೆ. ರಾಜ್ಯದ ಜನ ಭ್ರಷ್ಟಾಚಾರದಿಂದ ನೊಂದಿದ್ದಾರೆ. ಹೀಗಾಗಿ ಬಿಜೆಪಿಗೆ ಭಯ ಪ್ರಾರಂಭ ಆಗಿದೆ. ಹೀಗಾಗಿ ಈ ರೀತಿಯ ಅಭ್ಯರ್ಥಿಗಳನ್ನು ಹಾಕುತ್ತಿದ್ದಾರೆ. ಬಿಜೆಪಿಯವರು ಕೆಪಿಸಿಸಿ ಅಧ್ಯಕ್ಷರನ್ನು ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಾರನ್ನೂ ಕಟ್ಟಿ ಹಾಕಲು ಆಗುವುದಿಲ್ಲ. ಯಾರಿಗೆ ಏನು ಮಾಡಬೇಕು ಎಬುವುದು ಕನಕಪುರದ ಜನರಿಗೆ ಗೊತ್ತಿದೆ ಎಂದು ಟಾಂಗ್ ಕೊಟ್ಟಿದ್ದಾರೆ.








