ಬೆಂಗಳೂರು: ವಿಕಸಿತ ಭಾರತ ಕಾರ್ಯಕ್ರಮ ನಡೆದಿದ್ದು, ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಒಂದೇ ಗ್ಯಾರಂಟಿ ಅದು ಪ್ರಧಾನಿ ನರೇಂದ್ರ ಮೋದಿ. ಮೋದಿ ಗ್ಯಾರಂಟಿಗೆ ಮಾತ್ರ ಬೆಲೆ ಇದೆ. ಜನ ಅವರನ್ನು ಮಾತ್ರ ನಂಬುತ್ತಾರೆ ಎಂದು ಹೇಳಿದ್ದಾರೆ. ನನ್ನ ತೆರಿಗೆ, ನನ್ನ ಹಕ್ಕು ಕಾಂಗ್ರೆಸ್ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದೇಶದ ಎಲ್ಲಾ ಜನರು ತೆರಿಗೆ ಕಟ್ಟುತ್ತಾರೆ. ದೇಶದ ತೆರಿಗೆ ಹಣ ದೇಶದ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಲಾಗುವುದು. ಇದರಲ್ಲಿ ನನ್ನದು, ನಿನ್ನದು ಅಂತಿಲ್ಲ. ಎಲ್ಲರಿಗೂ ಕೇಳುವ ಹಕ್ಕಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ದೇಶದ ಹಿತ ಕಾಪಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಜೆಟ್ 27 ಸಾವಿರ ರೂ. ಕೋಟಿಯಾಗಿತ್ತು. 2014ರ ಬಳಿಕ ಈಗ ಒಂದು ಲಕ್ಷ ಕೋಟಿ ರೂ. ಆಗಿದೆ. ಎಂಎಸ್ಪಿಗೂ ಸಾವಿರಾರು ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದರು.