ಹವಾಮಾನ ವೈಪರಿತ್ಯ ಹೋರಾಟದಲ್ಲಿ ಅಭಿವೃದ್ಧಿ ರಾಷ್ಟ್ರಗಳ ಧ್ವನಿಯಾಗಲು ಭಾರತ ಸಿದ್ಧ : ಮೋದಿ
ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಮ್ಮ ದೇಶದ ಜಿಡಿಪಿಯ ಶೇ 1ರಷ್ಟನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿನ ಹಸಿರು ಯೋಜನೆಗಳಿಗೆ ನೀಡುವ ಕುರಿತು ಗುರಿ ನಿಗದಿಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಅಗತ್ಯ ಹಣಕಾಸು ನೆರವು ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ನಿರ್ಲಕ್ಷ್ಯಿಸುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ.
ಈ ಬಗ್ಗೆ ಸ್ಪಷ್ಟತೆ ಇಲ್ಲದೇ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಹವಾಮಾನ ಬದಲಾವಣೆ ನಿಯಂತ್ರಿಸುವಂತೆ ಒತ್ತಡ ಹೇರುವುದು ನ್ಯಾಯಸಮ್ಮತವಲ್ಲ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೇ ಈ ವಿಷಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗಷ್ಟೇ ಅನ್ಯಾಯ ಮಾಡುತ್ತಿಲ್ಲ ಇಡೀ ಮಾನವಕುಲಕ್ಕೆ ದ್ರೋಹ ಬಗೆಯುತ್ತಿದ್ದೇವೆ ಎಂದು ಮೋದಿ ಅವರು ಹೇಳಿದ್ದಾರೆ.