ಧಾರವಾಡದಲ್ಲಿ ಭೀಕರ ಅಪಘಾತದಲ್ಲಿ 13 ಮಂದಿ ಸಾವು: ಪ್ರಕರಣ ಸಂಬಂಧ ಸಂತಾಪ ಸೂಚಿಸಿದ ಮೋದಿ
ಬೆಂಗಳೂರು: ಧಾರವಾಡದಲ್ಲಿ ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ಲಾರಿ ನಡುವೆ ಬೆಳ್ಳಂ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದ್ದು, ಇನ್ನೂ ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
‘ದೀದಿ’ಗೆ ಶಾಕ್ ಮೇಲೆ ಶಾಕ್ : ಶತಾಬ್ದಿ ರಾಯ್ ಫೇಸ್ ಬುಕ್ ಪೋಸ್ಟ್ ನಿಂದ TMC ಗೆ ಆಘಾತ..!
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ’ ಎಂದಿದ್ದಾರೆ.
ಟೆಂಪೋ ಟ್ರಾವೆಲರ್ನಲ್ಲಿ ಗೋವಾ ಪ್ರವಾಸಕ್ಕೆ ಹೊರಟ್ಟಿದ್ದ ದಾವಣಗೆರೆ ಮೂಲದ 16 ಮಹಿಳೆಯರ ಪೈಕಿ 12 ಮಂದಿ ಸಾವಿಗೀಡಾಗಿದ್ದಾರೆ. ಇವರ ಜತೆಗೆ ಟಿಟಿ ಚಾಲಕನೂ ಮೃತಪಟ್ಟಿದ್ದು, 13 ಜನರು ಮೃತಪಟ್ಟಂತಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರಗೈದ ಪೊಲೀಸ್ ಪರಾರಿ.!
ಅಂಡರ್ ವೇರ್ ನಲ್ಲಿ 2.15 ಕೆಜಿ ಚಿನ್ನ ಸಾಗಾಟ : ಇಬ್ಬರು ಖದೀಮರು ಅಂದರ್..!
ಜ. 18ಕ್ಕೆ ‘ಮದಯಾನೈ’ ಆಗಿ ತಮಿಳಿನಲ್ಲಿ ಬರ್ತಿದ್ದಾರೆ ರೋರಿಂಗ್ ಸ್ಟಾರ್..!
ಸಲಾರ್ ಮುಹೂರ್ತ : ‘ಬಾಹುಬಲಿ’ ಜೊತೆ ರಾಖಿಭಾಯ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel