ಸುಳ್ಳು ಹೇಳೋದ್ರಲ್ಲಿ ಮೋದಿಗೆ ಆಸ್ಕರ್ ಕೊಡ್ಬೇಕು : ಸಲೀಂ ಅಹಮ್ಮದ್
ಹಾವೇರಿ : ಸುಳ್ಳು ಹೇಳುವುದರಲ್ಲಿ ಆಸ್ಕರ್ ಅವಾರ್ಡ್ ಕೊಡೋದಾದ್ರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಕಪ್ಪು ಹಣ ತರ್ತೀವಿ ಅಂದರು ತರಲಿಲ್ಲ.
ಪ್ರತಿಯೊಬ್ಬರ ಖಾತೆಗೆ ಹದಿನೈದು ಲಕ್ಷ ಹಾಕ್ತೀನಿ ಅಂದರು ಹಾಕಲಿಲ್ಲ. ಮೋದಿಯವರಿಗೆ ಯುವಕರ ಶಾಪ ತಟ್ಟುತ್ತದೆ.
ಯುವಕರು ಕೆಲಸವಿಲ್ಲದೆ ಬೀದಿಯಲ್ಲಿ ಅಲೆಯುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ನಮ್ಮ ಹೋರಾಟ ಕೋಮುವಾದಿ ಪಕ್ಷದ ವಿರುದ್ಧವಾಗಿದ್ದು, ಕೆಲವರು ಕೆಲವರ ಭಾವನೆ, ವಿಚಾರಗಳನ್ನು ಹೇಳಿರಬಹುದು.
ಅದು ಈಗ ಅಪ್ರಸ್ತುತ ಎಂದು ಮುಂದಿನ ಸಿಎಂ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾವು ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುತ್ತೇವೆ.
ನಮ್ಮ ನಾಯಕರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾವೆಲ್ಲರೂ ಕಾರ್ಯಕರ್ತರು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಸಲೀಂ ತಿಳಿಸಿದರು.