ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

#modi_rojgar_do | `ಪ್ರಧಾನ್ ಸೇವಕ್’ ವಿರುದ್ಧ ಡಿಜಿಟಲ್ ಸ್ಟ್ರೈಕ್

admin by admin
March 1, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

#modi_rojgar_do | `ಪ್ರಧಾನ್ ಸೇವಕ್’ ವಿರುದ್ಧ ಡಿಜಿಟಲ್ ಸ್ಟ್ರೈಕ್

#modi_rojgar_do …! ಕೆಲದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿರುವ ವಿಷಯ ಇದು. #modi_rojgar_do ಅಂದ್ರೆ ಮೋದಿ ಕೆಲಸ ಕೊಡಿ ಅಂತಾ ಅರ್ಥ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಟಾಕ್ ಆಫ್ ದಿ ಟೌನ್ ಆಗಿರುವ #modi_rojgar_do ಚಳವಳಿಯನ್ನ ನಾವು ನೀವು ಯಾವುದೇ ಪಕ್ಷದ ಹಿನ್ನಲೆಯಲ್ಲಿ ಆಗಲಿ.. ಅಥವಾ ಯಾವುದೋ ಪಕ್ಷದ ಕಾರ್ಯಕರ್ತರಾಗಲಿ ನೋಡುವುದನ್ನ ಬಿಟ್ಟ ಒಂದು ಸಾಮಾಜಿಕ ಸಮಸ್ಯೆಯಾಗಿ ಅಷ್ಟೆ ನೋಡಬೇಕಾಗಿದೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

modi_rojgar_do
ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಡಿಜಿಟಲ್ ಸ್ಟ್ರೈಕ್ ಗೆ ಕಾರಣ ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ತಾಂಡವಾಡುತ್ತಿರುವ ನಿರುದ್ಯೋಗ.. ಹೌದು..! ಸುಮಾರು ವರ್ಷಗಳಿಂದ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ವಿದ್ಯಾಭ್ಯಾಸ ಮುಗಿಸಿದ ಯುವಜನತೆ ಕೆಲಸವಿಲ್ಲದೇ ಪರದಾಡುತ್ತಿದ್ದಾರೆ. ಸುಮಾರು ವರ್ಷಗಳಿಂದ ದೇಶದಲ್ಲಿ ಈ ಸಮಸ್ಯೆ ಇದ್ದರೂ ಕೂಡ ಈಗ ಆಳುತ್ತಿರುವ ಪಕ್ಷವಾಗಲಿ, ಈ ಹಿಂದೆ ನಮ್ಮನ್ನ ಆಳಿದ ಪಕ್ಷಗಳಲಾಗಲಿ ಈ ಬಗ್ಗೆ ಹೆಚ್ಚು ಗಮನ ಕೊಡಲಿಲ್ಲ ಅನ್ನೋ ದುರಂತ.

ಇನ್ನ ನಮಗೆಲ್ಲರಿಗೂ ತಿಳಿದಿರುವಂತೆ ಭಾರತ ಅತಿ ಹೆಚ್ಚು ಯುವಶಕ್ತಿಯನ್ನ ಹೊಂದಿರುವ ದೇಶ. ಆದ್ರೆ ನಮ್ಮನ್ನ ಆಳಿದ ಆಳುತ್ತಿರುವ ಯಾವುದೇ ಸರ್ಕಾರಗಳಾಗಲಿ ಈ ಯುವಜನತೆಗೆ ಉದ್ಯೋಗವಕಾಶ ಕಲ್ಪಿಸಿಕೊಡುವ ಯಾವುದೇ ಪ್ರಮಾಣಿಕ ಪ್ರಯತ್ನ ಮಾಡಿಲ್ಲ ಮಾಡುತ್ತಿಲ್ಲ. ಪಾಪ ನಾವು ಪಕ್ಷಗಳನ್ನ ರಾಜಕಾರಣಿಗಳನ್ನ ದೂಷಿಸುವ ಕಾರಣವೇನಿದೆ, ಅವರನ್ನ ಆಯ್ಕೆ ಮಾಡಿಕಳಿಸುತ್ತಿರೋದು ನಾವೇ ಅಲ್ವಾ..? ಇದು ಹೋಗ್ಲಿ ಬಿಡಿ… ಇಲ್ಲಿ ಇನ್ನೊಂದು ವಿಚಾರವೇನಂದ್ರೆ ಕಳೆದ 20 ವರ್ಷಗಳಲ್ಲಿ ಸಾಕಷ್ಟು ಬದಲಾಗಿದೆ. ಜಗತ್ತು ಯಾರು ಊಹಿಸದಷ್ಟು ಮುಂದೆ ಹೋಗಿದೆ. ಆದ್ರೆ ನಮ್ಮಲ್ಲಿ ಈ 20 ವರ್ಷಗಳಿಂದ ಯುವಜನತೆಗೆ ಉದ್ಯೋಗವಕಾಶ ಕಲ್ಪಿಸಿಕೊಡುವ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ ಅನ್ನೋ ಅಂಕಿಅಂಶಗಳು ಸಾರಿ ಹೇಳುತ್ತಿವೆ.

ಅಂದಹಾಗೆ ಸದ್ಯ ದೇಶದಲ್ಲಿ ಕೊರೊನಾ, ಲಾಕ್ ಡೌನ್, ಒಂದಿಷ್ಟು ಸರ್ಕಾರದ ನೀತಿಗಳಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕೆಲಸ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಲಾಕ್ ಡೌನ್ ಬಳಿಕ ಅನೇಕ ಕಂಪನಿಗಳಲ್ಲಿ ನಷ್ಟದ ಹೆಸರೇಳಿ ಕೆಲಸಗಾರನ್ನ ಮನೆಗೆ ಕಳುಹಿಸುವ ಪ್ರಯತ್ನ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದ್ದವರು ಮಾತ್ರ, ಉದ್ಯಮ ನಡೆಸುವುದು ನಮ್ಮ ಕೆಲಸವಲ್ಲ ಅಂತಾ ಜಾರಿಕೊಳ್ಳುತ್ತಿದ್ದಾರೆ.

ಈ ಮಧ್ಯೆ ಸೆಂಟರ್ ಫ್ರಂ ಮಾನಿಟರಿಂಗ್ ಇಂಡಿಯನ್ ಎಕೊನಾಮಿ (ಸಿಎಂಐಇ) ನಿರುದ್ಯೋಗಕ್ಕೆ ಸಂಬಂಧಿಸಿದಂತೆ ಒಂದು ಸಮೀಕ್ಷಾ ವರದಿಯನ್ನ ಬಿಡುಗಡೆ ಮಾಡಿದೆ. ಅದರಂತೆ 2019 -2020 ರಲ್ಲಿ ಸುಮಾರು 40 ಕೋಟಿ 30 ಲಕ್ಷ ಜನ ಉದ್ಯೋಗಿಗಳಾಗಿದ್ದರು ಮತ್ತು ಮೂರುವರೆ ಕೋಟಿ ಜನ ನಿರುದ್ಯೋಗಿಗಳಾಗಿ ಗುರುತಿಸಿಕೊಂಡಿದ್ದರು. ನಿರುದ್ಯೋಗಿಗಳ ಈ ಪಟ್ಟಿಗೆ ಪ್ರತಿ ವರ್ಷ ಒಂದಿಷ್ಟು ಮಂದಿ ಸೇರಿಕೊಳ್ಳುತ್ತಾರೆ. ಕಳೆದ ವರ್ಷ ಕೊರೊನಾದಿಂದಾಗಿ ಇದರ ಸಂಖ್ಯೆ ಹೆಚ್ಚಾಗಿದೆ ಅಂತಾ ವರದಿ ಹೇಳಿದೆ.

modi_rojgar_do

ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದ ಉದ್ಯೋಗ ಹೊಸ ಸೃಷ್ಟಿ ಇರಲಿ, ಉದ್ಯೋಗಿಗಳ ಸಂಖ್ಯೆ ಕೂಡ ಕಡಿಮೆ ಇದೆಯಂತೆ. 201617ರಲ್ಲಿ 407.3 ಮಿಲಿಯನ್ ಇದ್ದ ಉದ್ಯೋಗಿಗಳ ಸಂಖ್ಯೆ 2018-19ಕ್ಕೆ 400 ಮಿಲಿಯನ್ ಗೆ ಇಳಿಕೆಯಾಗಿದೆ ಅಂತಾ ವರದಿ ತಿಳಿಸಿದೆ. ಇದರಿಂದ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಲೇ ಇದೆ.

ಇಲ್ಲಿ ನಾವೆಲ್ಲಾ ತಿಳಿದುಕೊಳ್ಳಬೇಕಾದ ಮತ್ತೊಂದು ವಿಷಯ ಏನಂದ್ರೆ ಭಾರತದ ಜನಸಂಖ್ಯೆ ಆಧಾರದಲ್ಲಿ ದೇಶದಲ್ಲಿ ಪ್ರತಿವರ್ಷ 2 ಕೋಟಿ ಮಂದಿಗೆ ಉದ್ಯೋಗ ಸೃಷ್ಠಿಯಾಗಬೇಕಾಗುತ್ತದೆ. ಇದು ನಡೀತಿದ್ಯಾ..? ಅನ್ನೋ ಪ್ರಶ್ನೆಗೆ ಉತ್ತರ ಇಲ್ಲ.

ಹೌದು..! ನಮ್ಮಲ್ಲಿ ಉದ್ಯೋಗ ಸೃಷ್ಟಿ ಎರಡು ರೀತಿ ಆಗಬೇಕು. ಒಂದು ಸರ್ಕಾರಿ ನೌಕರಿ ಮತ್ತೊಂದು ಖಾಸಗಿ ನೌಕರಿ. ಆದ್ರೆ ಈ ಎರಡುವಲಯಗಳಲ್ಲೂ ಉದ್ಯೋಗ ಸೃಷ್ಠಿ ಆಗುತ್ತಿಲ್ಲ.

ಸರ್ಕಾರಿ ನೌಕರಿ ಅನ್ನೋ ಸದ್ಯ ಕಬ್ಬಿಣದ ಕಡಲೆಯಾಗಿದೆ. ಸರ್ಕಾರಿ ಕೆಲಸ ದೇವರ ಕೆಲಸವಾಗಿರುವುದರಿಂದ ಅಲ್ಲಿ ಹುಂಡಿಗೆ ಕಾಣಿಕೆ ಹಾಕಿಲ್ಲ ಅಂದ್ರೆ ಕೆಲಸ ನಡೆಯೋದೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಬಡ ನಿರುದ್ಯೋಗ ಯುವಕ- ಯುವತಿಯರು ಅದ್ಹೇಗೆ ತಾನೆ ಉದ್ಯೋಗಿಗಳಾಗುತ್ತಾರೆ. ಇನ್ನು ಖಾಸಗಿ ವಲಯದ ವಿಷಯಕ್ಕೆ ಬಂದ್ರೆ ಇಲ್ಲೂ ಕೂಡ ಹೇಳಿಕೊಳ್ಳುವಂತಹ ಉದ್ಯೋಗ ಸೃಷ್ಠಿಯಾಗುತ್ತಿಲ್ಲ. ಇದೆಲ್ಲಾ ಬೇಡ ಸ್ವಾಮಿ, ನಾವೇ ಏನೋ ಒಂದು ಕೆಲಸ ಮಾಡ್ಕೋತೀವಿ. ಸ್ವಯಂ ಉದ್ಯೋಗ ಮಾಡಿಕೊಳ್ಳೋಣ ಅಂದ್ರೆ ಅದಕ್ಕೆ ಬಂಡವಾಳವೇ ಸಿಗಲ್ಲ. ದೇಶದಲ್ಲಿ ಗಲ್ಲಿ ಗಲ್ಲಿಗೂ ಬ್ಯಾಂಕ್ ಗಳಿದ್ದರೂ ಯುವಜನತೆಗೆ ಲೋನ್ ಮಾತ್ರ ಮರೀಚಿಕೆ. ಸ್ವಾಮಿ ನಮಗೆ ಒಂದಿಷ್ಟು ಸಾಲ ಕೊಡಿ ನಮ್ಮ ಜೀವನವನ್ನ ಹೇಗೋ ಸಾಗಿಸ್ತೀವಿ ಅಂತಾ ಬ್ಯಾಂಕ್ ನಲ್ಲಿ ಲೋನ್ ಗೆ ಅಪ್ಲೆ ಮಾಡಿದ್ರೆ ಅಲ್ಲಿ ನೂರೆಂಟು ಕಾನೂನುಗಳು. ಲೋನ್ ಸಿಗುವಷ್ಟರಲ್ಲಿ ಬರುವ ಲೋನ್ ಹಣದಷ್ಟೆ ನಮ್ಮ ಕಾಸು ಖರ್ಚಾಗಿರುತ್ತೆ. ಇತಂಹ ಪರಿಸ್ಥಿತಿಯಲ್ಲಿ ದೇಶದಲ್ಲಿ ನಿರುದ್ಯೋಗ ಸೃಷ್ಟಿಯಾಗದೇ ಮತ್ತೇನಾಗುತ್ತೆ ಅಲ್ವಾ.

modi_rojgar_do

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ #modi_rojgar_do ವಿಚಾರಕ್ಕೆ ಬಂದ್ರೆ ಟ್ವಿಟ್ಟರ್ ನಲ್ಲಿ ಶುರುವಾಗಿರುವ ಈ ಅಭಿಯಾನಕ್ಕೆ ರಾಜಕೀಯ ಕೆಸರನ್ನ ಎರಚಲಾಗುತ್ತಿದೆ. ಇದು ರಾಜಕೀಯ ಪ್ರೇರಿತ ಅಂತಾ ಟೀಕೆ ಮಾಡಲಾಗುತ್ತಿದೆ.

ಒಟ್ಟಾರೆ #modi_rojgar_do ಅಭಿಯಾನ ರಾಜಕೀಯ ಪ್ರೇರಿತವೋ ಅಲ್ಲವೋ ಗೊತ್ತಿಲ್ಲ. ಆದ್ರೆ ನಿರುದ್ಯೋಗ ಸಮಸ್ಯೆ ಇದೆ ಅನ್ನೋ ನೂರಕ್ಕೆ ನೂರರಷ್ಟು ಸತ್ಯ. ಹೀಗಾಗಿ ನಮ್ಮನ್ನ ಆಳುತ್ತಿರುವ ನಾಯಕರು ರಾಜಕೀಯದಲ್ಲೇ ಮುಳುಗಿ ಒದ್ದಾಡೋದನ್ನ ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಅನ್ನೋದು ನಮ್ಮ ಕಳಕಳಿ.

Motera stadium
ಜಾಹೀರಾತು
Tags: #modi_rojgar_doBJPCongress
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram