ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೋದಿ ನಿವೃತ್ತಿ ಮತ್ತು ದಲಿತ ಪ್ರಧಾನಿ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ

Modi's retirement and Dalit Prime Minister: War of words between BJP and Congress

Shwetha by Shwetha
July 18, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವೃತ್ತಿ ಕುರಿತ ಆರ್‌ಎಸ್‌ಎಸ್‌ನ ಸೂಚನೆಯು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ದಲಿತ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಯಾರಾಗಬೇಕು ಎಂಬುದನ್ನು ಪಕ್ಷವೇ ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

July 16, 2026
ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

July 16, 2026

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, “ಕಾಂಗ್ರೆಸ್‌ಗೆ ನಿಜವಾಗಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ, ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ” ಎಂದು ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ “ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ವಿಜಯೇಂದ್ರ, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಆತ್ಮವಂಚನೆಯನ್ನು ಮಾತ್ರವಲ್ಲದೆ, ದುರಹಂಕಾರವನ್ನೂ ಸೂಚಿಸುತ್ತದೆ” ಎಂದು ಟೀಕಿಸಿದ್ದಾರೆ.

ಬಿಜೆಪಿಯ ದಲಿತ ಮತ್ತು ಹಿಂದುಳಿದ ನಾಯಕರ ಕುರಿತ ಇತಿಹಾಸ ಕೆದಕಿದ ಸಿದ್ದರಾಮಯ್ಯ

ವಿಜಯೇಂದ್ರ ಅವರಿಗೆ “ಓದುವ ಅಭ್ಯಾಸ ಇದ್ದರೆ, ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬುದನ್ನು ತಿಳಿದುಕೊಳ್ಳಲಿ” ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಅಲ್ಲದೆ, ಬಿಜೆಪಿ ದಲಿತ ನಾಯಕರನ್ನು ನಡೆಸಿಕೊಂಡ ರೀತಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ:

* “ಬಂಗಾರು ಲಕ್ಷ್ಮಣ್ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ, ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು?”

* “ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ, ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ?”

* “ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ?”

ಎಸ್. ಬಂಗಾರಪ್ಪ ಮತ್ತು ಕರ್ನಾಟಕದ ರಾಜಕೀಯ
ಹಿಂದುಳಿದ ನಾಯಕರನ್ನು ಬಿಜೆಪಿ ನಡೆಸಿಕೊಳ್ಳುವ ಬಗ್ಗೆ ರಾಜ್ಯದ ಉದಾಹರಣೆ ನೀಡಿದ ಸಿದ್ದರಾಮಯ್ಯ, “ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್. ಬಂಗಾರಪ್ಪನವರೇ ಸಾಕ್ಷಿ” ಎಂದಿದ್ದಾರೆ.

“ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ.ಎಸ್. ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ” ಎಂದು ಆರೋಪಿಸಿದ್ದಾರೆ. “ಬಂಗಾರಪ್ಪನವರಿರಲಿ, ಮೋದಿ ಅವರೇ ಇರಲಿ, ಎಲ್ಲಿಯವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಗೆ ದಲಿತ ನಾಯಕತ್ವದ ಸವಾಲು

ಸಿದ್ದರಾಮಯ್ಯ ಅವರು ಬಿಜೆಪಿಗೆ ದಲಿತ ನಾಯಕತ್ವದ ಬಗ್ಗೆ ನೇರ ಸವಾಲು ಹಾಕಿದ್ದಾರೆ: “ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ.”
ಅಲ್ಲದೆ, ತಾವೇ ಒಂದು ಹೆಸರನ್ನು ಸೂಚಿಸಿದ್ದಾರೆ: “ದಲಿತ ನಾಯಕ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತಃ ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ.”
“ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು” ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ, “ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ” ಎಂದು ಆರೋಪಿಸಿದ್ದಾರೆ. “ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿ ತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ನಿಮ್ಮಲ್ಲಿ ಉತ್ತರ ಇದೆಯಾ?” ಎಂದೂ ಪ್ರಶ್ನಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಿಲುವು
ಮಲ್ಲಿಕಾರ್ಜುನ ಖರ್ಗೆ ಕುರಿತು ಮಾತನಾಡಿದ ಸಿದ್ದರಾಮಯ್ಯ, “ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ, ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪರ ಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ.” ಎಂದು ಗುಣಗಾನ ಮಾಡಿದ್ದಾರೆ.

“ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ” ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಮೋದಿ ನಿವೃತ್ತಿ ಮತ್ತು ದಲಿತ ಪ್ರಧಾನಿ ಅವಕಾಶ: ಸಿದ್ದರಾಮಯ್ಯ ಸವಾಲು

ಅಂತಿಮವಾಗಿ, ಸಿದ್ದರಾಮಯ್ಯ ಅವರು ಬಿಜೆಪಿಗೆ ಪ್ರಧಾನಮಂತ್ರಿ ಸ್ಥಾನದ ಬಗ್ಗೆ ಸವಾಲು ಹಾಕಿದ್ದಾರೆ: “ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ಮೋದಿಯವರ ಪದಚ್ಯುತಿಯ ಸೂಚನೆಯನ್ನು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ.”

“ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ, ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದ ಕಾರಜೋಳ ಅವರೋ, ಛಲವಾದಿ ನಾರಾಯಣಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವವರಲ್ಲಿ ನಾನು ಮೊದಲಿಗನಾಗುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿಕೆ ಮುಗಿಸಿದ್ದಾರೆ.

ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

by Shwetha
July 16, 2026
0

ಬೆಂಗಳೂರು: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತಪಡಿಸಿದ್ದಾರೆ....

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

by Shwetha
July 16, 2026
0

ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು, ಪ್ರಸ್ತುತ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ವಾದ ಮಂಡಿಸಿದ್ದಾರೆ. ಅಧಿಕಾರಿಗಳ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

by Shwetha
July 16, 2026
0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಯೋಜನೆಯ ಸುತ್ತ ಸೃಷ್ಟಿಯಾಗಿರುವ ವಿವಾದವೀಗ ಬಹಿರಂಗ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇಂದು ಬೆಂಗಳೂರಿನಲ್ಲಿ ಡಿಕೆ...

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

by Shwetha
July 16, 2026
0

ಕರ್ನಾಟಕ ಸರ್ಕಾರದ ಇಂದು (16-07-2026) ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಈ ಕುರಿತು ಸರ್ಕಾರದ ಸಚಿವಾಲಯದ ಸಂಪುಟ ಶಾಖೆ ಅಧಿಕೃತ ಸೂಚನೆ ಹೊರಡಿಸಿದೆ. ಮೂಲ ವೇಳಾಪಟ್ಟಿಯಂತೆ,...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 16, 2026
0

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಲ್ಲಿ ಭದ್ರತಾ ಲೋಪ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram