ದೆಹಲಿ : ಖಲಿಸ್ತಾನಿ, ಆಮ್ ಆದ್ಮಿ ಪಕ್ಷಕ್ಕೆ ಸುಮಾರು 133.54 ಕೋಟಿ ರೂ.ಗಳ ಆರ್ಥಿಕ ನೆರವು ನೀಡಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರುಪತ್ ವಂತ್ ಸಿಂಗ್ ಪನ್ನುನ್ ತಿಳಿಸಿದ್ದಾನೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟ ವಿಡಿಯೊದಲ್ಲಿ, ಪನ್ನುನ್, ದೇವಿಂದರ್ ಪಾಲ್ ಸಿಂಗ್ ಭುಲ್ಲರ್ನ್ನು ಬಿಡುಗಡೆ ಮಾಡುವುದಕ್ಕಾಗಿ ದೆಹಲಿ ಸಿಎಂ ಕೇಜ್ರಿವಾಲ್ ನಿಧಿಗೆ ಹಣ ನೀಡಲಾಗಿದೆ ಎಂದು ಆರೋಪಿಸಿದ್ದಾನೆ. ಭುಲ್ಲರ್ 1993 ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿದ್ದು, ಈ ಬಾಂಬ್ ಸ್ಫೋಟದಲ್ಲಿ 9 ಜನ ಸಾವನ್ನಪ್ಪಿ, 31 ಜನ ಗಾಯಗೊಂಡಿದ್ದರು.
ಸಂಸತ್ತಿನ ಅಡಿಪಾಯ “ಅಲುಗಾಡಿಸುವ” ಪ್ರತಿಜ್ಞೆ ಸೇರಿದಂತೆ ಸಿಖ್ಸ್ ಫಾರ್ ಜಸ್ಟಿಸ್ ನಾಯಕ ಈ ಹಿಂದೆ ಭಾರತದ ವಿರುದ್ಧ ಬೆದರಿಕೆ ಹಾಕಿದ್ದ. ಪನ್ನುನ್, ಕೇಜ್ರಿವಾಲ್ ಮತ್ತು ಅವರ ಪಕ್ಷವು ಖಲಿಸ್ತಾನಿ ಗುಂಪುಗಳಿಂದ ಹಣ ಪಡೆದಿದೆ ಎಂದು ಆರೋಪಿಸುವುದ್ದು ಇದು ಮೊದಲಲ್ಲ. ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಬ್ಬರೂ ಯುಎಸ್ ಮತ್ತು ಕೆನಡಾದಲ್ಲಿ ಖಾಲಿಸ್ತಾನ್ ಬೆಂಬಲಿಗರಿಂದ 6 ಮಿಲಿಯನ್ ಡಾಲರ್ ದೇಣಿಗೆ ಸ್ವೀಕರಿಸಿದ್ದಾರೆ ಎದು ಜನವರಿಯಲ್ಲಿ ಹೇಳಿದ್ದ.
ಅಬಕಾರಿ ನೀತಿ “ಹಗರಣ” ದಲ್ಲಿ ಕೇಜ್ರಿವಾಲ್ ಬಂಧನದ ನಂತರ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ. ಬಂಧನದಲ್ಲಿದ್ದರೂ ಮುಖ್ಯಮಂತ್ರಿಯಾಗಿ ಮುಂದುವರಿಯಲು ಎಎಪಿ ನಿರ್ಧರಿಸಿದೆ.