ಸಿಡಿಲಿಗೆ 40ಕ್ಕೂ ಅಧಿಕ ಕುರಿ, ಮೇಕೆಗಳು ಬಲಿ
ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾಚನಾಯಕನ ಹಳ್ಳಿಯಲ್ಲಿ ಸಿಡಿಲು ಬಡಿದು 40ಕ್ಕೂ ಹೆಚ್ಚು ಕುರಿ, ಮೇಕೆಗಳು ಸಾವನ್ನಪ್ಪಿವೆ.
ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಿ ಅವಘಡ ಸಂಭವಿಸಿದೆ. ಈ ಕುರಿ ಮತ್ತು ಮೇಕೆಗಳು ಚನ್ನಗಿರಿ ತಾಲೂಕಿನ ಗೊಲ್ಲರಹಳ್ಳಿಯ ಕುರಿಗಾಹಿಗಳಾದ ಚಿತ್ತಪ್ಪ, ಕಾಟಪ್ಪ ಎಂಬುವರಿಗೆ ಸೇರಿವೆ ತಿಳಿದು ಬಂದಿದೆ. ಒಮ್ಮೆಲೆ 40ಕ್ಕೂ ಅಧಿಕ ಕುರಿ, ಮೇಕೆಗಳು ಸಾವನ್ನಪ್ಪಿದ್ದರಿಂದ ಕುರಿಗಾಹಿಗರಿಗೆ ಲಕ್ಷಾಂತರ ರೂ.ನಷ್ಟವಾಗಿದೆ.
ಇನ್ನೂ ಕುರಿಗಳನ್ನು ಕಳೆದುಕೊಂಡ ಕುರಿಗಾಹಿ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಮಾಹಿತಿ ತಿಳಿದು ಘಟನ ಸ್ಥಳಕ್ಕಾಗಮಿಸಿದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷ ಅವರು ಪರಿಶೀಲನೆ ನಡೆಸಿ, ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಇದಲ್ಲದೇ, ದಾವಣಗೆರೆ ಪಿಜೆ ಬಡಾವಣೆಯಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅನಾಹುತ ತಪ್ಪಿದೆ.