ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆಯಿಂದ ಮಳೆ (Rian in Bengaluru) ಆರಂಭವಾಗಿದ್ದು, ಮಳೆಯಲ್ಲಿಯೇ ಪ್ರತಿಯೊಬ್ಬರೂ ಕೆಲಸಕ್ಕೆ ಹೊರಡಬೇಕಾದ ಅನಿವಾರ್ಯತೆ ಅನುಭವುತ್ತಿದ್ದಾರೆ.
ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನಗರದಲ್ಲಿ ತುಂತುರು ಮಳೆಯಾಗುತ್ತಿದೆ. ಚೆನ್ನೈ ಸೇರಿದಂತೆ ತಮಿಳುನಾಡು ಭಾಗದಲ್ಲಿ ಧಾರಕಾರವಾಗಿ ಮಳೆಯಾಗುತ್ತಿದೆ. ಸದ್ಯದ ಹವಾಮಾನ ಗಮನಿಸಿದರೆ, ರಾಜ್ಯದಲ್ಲಿ ಮುಂಗಾರು ಚುರುಕು ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಮಳೆ ಮನ್ಸೂಚನೆ ಸಿಕ್ಕಿದ್ದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಂತುರು ಮಳೆಯಿಂದಾಗಿ ಶಾಲಾ, ಕಾಲೇಜು ಹಾಗೂ ಕೆಲಸಕ್ಕೆ ಹೋಗೋರಿಗೆ ಕೊಂಚ ಕಿರಿಕಿರಿ ಉಂಟು ಮಾಡಿದೆ. ಆದರೂ ಜನ ಕೊಡೆ ಹಿಡಿದು ತಮ್ಮ ತಮ್ಮ ಕಾರ್ಯಗಳಿಗೆ ತೆರಳುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಬಿಡಲು ಪೋಷಕರು ಹರಸಾಹಸ ಪಡುತ್ತಿದ್ದಾರೆ. ರಾಜ್ಯದಲ್ಲಿ 48 ಗಂಟೆಗಳ ಕಾಲ ಮಳೆಯ ಮುನ್ಸೂಚನೆ ಇದೆ. ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಘಂಟೆಗಳ ಕಾಲ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗ ಸಹಿ. ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ








