ಮಂಡ್ಯ : ಕಾವೇರಿ ಹಾಗೂ ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜನರ ಜೀವನಾಡಿಯಾಗಿರುವ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ನಲ್ಲಿ ಕೇವಲ 7 ದಿನಗಳ ಅಂತರದಲ್ಲಿ 15 ಅಡಿಗೂ ಹೆಚ್ಚು ನೀರು ಬಂದಿದೆ. ಇದು ರೈತರ ಸಂತಸಕ್ಕೆ ಕಾರಣವಾಗಿದೆ.
124.80 ಅಡಿ ಗರಿಷ್ಠ ಸಾಮರ್ಥ್ಯ ವಿರುವ ಕೆಆರ್ ಎಸ್ ನಲ್ಲಿ ಸದ್ಯ 124.05 ಅಡಿ ಭರ್ತಿಯಾಗಿದೆ. ಡ್ಯಾಂಗೆ ಒಳ ಹರಿವು 13,581 ಕ್ಯೂಸೆಕ್ ಇದ್ದರೆ, 3,863 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಬಾಗಿನ ಅರ್ಪಿಸಲಾಗುತ್ತದೆ. ಕೆಆರ್ಎಸ್ ಭರ್ತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಾಗಿನ ಅರ್ಪಣೆ ಮಾಡಲಿದ್ದಾರೆ.