ಬೀಗ್ ಹಾಕಿದ ಮನೆಯನ್ನೆ ಕಳ್ಳತನ ಮಾಡುತ್ತಿದ್ದ ಕಳ್ಳಿ
ಬೆಂಗಳೂರು: ಬೀಗ ಹಾಕಿದ ಮನೆಯನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಖತರಾನ್ ಕಳ್ಳಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ.
ಜಯಂತಿ ಅಲಿಯಾಸ್ ಕುಟ್ಟಿಯಮ್ಮ ಬಂಧಿತ ಆರೋಪಿ. ಈಕೆಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಈಕೆ ನಗರದಲ್ಲಿ ಒಟ್ಟು 23 ಕಡೆ ಕಳ್ಳತನ ಪ್ರಕರಣದಲ್ಲಿ ಬೇಕಾಗಿದ್ದಾಳೆ. ಕಳ್ಳಿಯು ಮೊದಲಿಗೆ ಬೀಗ ಹಾಕಿದ್ದ ಮನೆಗಳನ್ನು ಗುರುತಿಸುತ್ತಿದ್ದಳು. ಬಳಿಕ ಒಂಟಿಯಾಗಿ ಮನೆಗಳಿಗೆ ಪ್ರವೇಶ ನೀಡಿ, ಮನೆ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡುತ್ತಿದ್ದಳು.
ಈಕೆ ಒಂದೇ ಏರಿಯಾದಲ್ಲಿ ಎರಡು ಕಳ್ಳತನ ಮಾಡಿದ್ದಳು. ಈ ವೇಳೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ವೇಳೆ ಇದು ಕಳ್ಳಿ ಜಯಂತಿ ಎಂಬುದು ಪತ್ತೆಯಾಗಿದೆ. ಜಯಂತಿಯನ್ನು ಬಂಧಿಸಿದ ನಂತರ ಮತ್ತೆ ಎರಡು ಹೊಸ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ
ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.