ಕಲಬುರಗಿ: ʻತಾಯಿ ನಮ್ಮ ಅತ್ತೆ ಬೇಗ ಸಾಯಬೇಕುʼ ಎಂದು ಮಹಿಳೆಯೊಬ್ಬರು ನೋಟಿನ ಮೇಲೆ ಬರೆದು ದೇವಿಯ ಹುಂಡಿಗೆ ಹಾಕಿರುವ ಘಟನೆ ನಡೆದಿದೆ.
ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಫಜಲಪುರದ ಸುಕ್ಷೇತ್ರ ಘತ್ತರ್ಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿ ಈ ನೋಟ್ (currency) ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳ ಹಿಂದೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಮಹಿಳೆ 20 ರೂ. ನೋಟಿನ ಮೇಲೆ ಅತ್ತೆ ಸಾಯಲೆಂದು ಬರಹ ಬರೆದು ಭಾಗ್ಯವಂತಿ ದೇವಿಯ ಹುಂಡಿಗೆ ಹರಕೆ ಹೊತ್ತಿದ್ದಾರೆ.
ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಮಾಡುವ ವೇಳೆ ಅತ್ತೆ ಸಾಯಲೆಂದು ಹರಕೆ ಹೊತ್ತು ಕಾಣಿಕೆ ಅರ್ಪಿಸಿರುವ ನೋಟ್ ಪತ್ತೆಯಾಗಿದೆ. ಸದ್ಯ ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








