ಕಲಬುರಗಿ: ʻತಾಯಿ ನಮ್ಮ ಅತ್ತೆ ಬೇಗ ಸಾಯಬೇಕುʼ ಎಂದು ಮಹಿಳೆಯೊಬ್ಬರು ನೋಟಿನ ಮೇಲೆ ಬರೆದು ದೇವಿಯ ಹುಂಡಿಗೆ ಹಾಕಿರುವ ಘಟನೆ ನಡೆದಿದೆ.
ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಫಜಲಪುರದ ಸುಕ್ಷೇತ್ರ ಘತ್ತರ್ಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿ ಈ ನೋಟ್ (currency) ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳ ಹಿಂದೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಮಹಿಳೆ 20 ರೂ. ನೋಟಿನ ಮೇಲೆ ಅತ್ತೆ ಸಾಯಲೆಂದು ಬರಹ ಬರೆದು ಭಾಗ್ಯವಂತಿ ದೇವಿಯ ಹುಂಡಿಗೆ ಹರಕೆ ಹೊತ್ತಿದ್ದಾರೆ.
ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಮಾಡುವ ವೇಳೆ ಅತ್ತೆ ಸಾಯಲೆಂದು ಹರಕೆ ಹೊತ್ತು ಕಾಣಿಕೆ ಅರ್ಪಿಸಿರುವ ನೋಟ್ ಪತ್ತೆಯಾಗಿದೆ. ಸದ್ಯ ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇಕಡಾ 5ರಷ್ಟು ಜಾಗವನ್ನು ಇತರ ಉದ್ದೇಶಗಳಿಗೆ ಬಳಸಿಕೊಳ್ಳುವ ರಾಜ್ಯ ಸರ್ಕಾರದ ತೀರ್ಮಾನ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವು...








