ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ನೀಡಿದ್ದ ಸಂವಿಧಾನ ತಿದ್ದುಪಡಿ ಹೇಳಿಕೆಗೆ ರಾಜ್ಯ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ, ಹೆಗಡೆ ಅವರ ಸಂವಿಧಾನದ ಬಗೆಗಿನ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳೇ ಹೊರತು ಪಕ್ಷದ ನಿಲುವು ಬಿಂಬಿಸುವುದಿಲ್ಲ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ. ಬಿಜೆಪಿ ರಾಷ್ಟ್ರದ ಸಂವಿಧಾನವನ್ನು ಎತ್ತಿ ಹಿಡಿಯುವ ಅಚಲವಾದ ಬದ್ಧತೆ ಹೊಂದಿದೆ. ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಪಕ್ಷವು ಸೂಚಿಸಿದೆ ಎಂದು ತಿಳಿಸಿದೆ.
ವಿಧಾನ ತಿದ್ದುಪಡಿ ಮಾಡೋದಾದ್ರೆ ಬಹುಮತ ಅವಶ್ಯ. ಕಾಂಗ್ರೆಸ್ ಸಂವಿಧಾನದ ಮೂಲ ರೂಪ ತಿರುಚಿದರು. ಬೇಡಾದ ವಿಷಯವನ್ನು ಅದರಲ್ಲಿ ಹಾಕಿದರು. ಇದೆಲ್ಲವೂ ಬದಲಾಗಬೇಕಿದ್ದರೇ ಈ ಅಲ್ಪಮತದಲ್ಲಿ ಆಗುವುದಿಲ್ಲ. ಎರಡೂ ಕಡೆ 2/3 ಬಹುಮತ ಬೇಕಾಗುತ್ತೆ. ಸಿಎಎಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ, ಸಿಎಎ ತರದಿದ್ರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಲಿ ಇರಲ್ಲ. ಎಲ್ಲಾ ಕಡೆ 2/3 ಮೆಜಾರಿಟಿ ಬರಲಿ, ಆಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಅಂತ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನ ಈ ದೇಶದ್ರೋಹಿ ಸರ್ಕಾರ ಹೋಗಬೇಕು. ಜಾತ್ಯತೀತರು ಇದನ್ನ ತೀರ್ಮಾನ ಮಾಡಿಲ್ಲ. ತೀರ್ಮಾನ ಮಾಡಿದವರು ನಮ್ಮ ಹಿಂದೂಗಳು. ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ, ಸಂವಿಧಾನ ತಿದ್ದುಪಡಿ ಆಗಬೇಕಾದರೆ ಮೆಜಾರಿಟಿ ಬೇಕು ಎಂದು ಹೇಳಿದ್ದಾರೆ. ಇದಕ್ಕೆ ಸ್ವ ಪಕ್ಷವೇ ವಿರೋಧ ವ್ಯಕ್ತಪಡಿಸಿದೆ.