ಮೈಸೂರು: ಮುಡಾ ನಿವೇಶನ (MUDA Scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎ2 ಪಾರ್ವತಿ ಸಿದ್ದರಾಮಯ್ಯ ಅವರ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದ್ದು, ಅದರ ಬೆನ್ನಲ್ಲೇ ಈಗ ಸಿಎಂ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.
ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಮುಡಾ ಕೇಸ್ ನಲ್ಲಿ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಧಿಸಿದಂತೆ ಎ1 ವಿಚಾರಣೆ ಮಾತ್ರ ಬಾಕಿಯಿದೆ. ಹೀಗಾಗಿ ಸಿಎಂಗೆ ನೋಟಿಸ್ ನೀಡಲು ಲೋಕಾಯುಕ್ತ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಪತ್ನಿ ಪಾರ್ವತಮ್ಮ ವಿಚಾರಣೆಯ ಟಿಪ್ಪಣಿ ಬರೆಯುತ್ತಿದ್ದಾರೆ. ಟಿಪ್ಪಣಿ ಕಾರ್ಯ ಮುಗಿದ ಮೇಲೆ ಸಿಎಂಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಎ1 ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಲೋಕಾಯುಕ್ತ 3 ಗಂಟೆಗಳ ಕಾಲ ಸಿಎಂ ಪತ್ನಿಯನ್ನು ವಿಚಾರಣೆ ನಡೆಸಿದ್ದಾರೆ.








