26/11 ರ ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಪವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಸಾಧ್ಯತೆ ಹೆಚ್ಚಾಗಿದೆ.
2008ರಲ್ಲಿ ಭಾರತದಲ್ಲಿ ನಡೆದ 26/11ರ ಮುಂಬಯಿ ಭಯೋತ್ಪಾದಕ ದಾಳಿಯಲ್ಲಿ ಈತನ ಭಾಗಿಯಾಗಿರುವುದು ಕಂಡು ಬಂದಿದೆ. ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಅಮೆರಿಕಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಉಗ್ರ ತಹವ್ವುರ್ ರಾಣಾ ಹೇಬಿಯಲ್ ಕಾರ್ಪಸ್ ರಿಚ್ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ವಜಾಗೊಳಿಸಿತ್ತು.
ಕ್ಯಾಲಿಫೋರ್ನಿಯಾದ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಯುನೈಟೆಡ್ ಸ್ಟೇಟ್ಸ್ ಜಿಲ್ಲಾ ನ್ಯಾಯಾಧೀಶ ಡೇಲ್ ಎಸ್ ಫಿಶರ್ ಆಗಸ್ಟ್ 2ರಂದು ರಾಣಾ ಮನವಿಯನ್ನು ವಜಾಗೊಳಿಸಿದರು. ವಿಚಾರಣೆಯವರೆಗೆ ತನ್ನನ್ನು ಭಾರತಕ್ಕೆ ಹಸ್ತಾಂತರಿಸಬಾರದು ಎಂಬ ಆದೇಶದ ವಿರುದ್ಧ ರಾಣಾ 9ನೇ ಸರ್ಕ್ಯೂಟ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದ.