ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್ ಡೌನ್ – ಮದ್ಯ ಹೋಂ ಡೆಲಿವರಿಗೆ ಅನುಮತಿ
ಕೊರೋನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಅನ್ನು ಪರಿಗಣಿಸುತ್ತಿದೆ. ವಾರಾಂತ್ಯದ ಲಾಕ್ಡೌನ್ ಮತ್ತು ರಾತ್ರಿ ಕರ್ಫ್ಯೂ ಮುಂತಾದ ಕ್ರಮಗಳನ್ನು ಸರ್ಕಾರ ಈಗಾಗಲೇ ಕೈಗೊಂಡಿದೆ.
ಏತನ್ಮಧ್ಯೆ, ಬೃಹನ್ಮುಂಬೈ ಮುನ್ಸಿಪಾಲಿಟಿ ಕೌನ್ಸಿಲ್ (ಬಿಎಂಸಿ) ಮಹಾನಗರದಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಮನೆಗೆ ಮದ್ಯ ವಿತರಿಸಲು ಅನುಮತಿ ನೀಡಿದೆ. ಆದರೆ ಹೋಂ ಡೆಲಿವರಿ ವರ್ಕರ್ಸ್ ಎಲ್ಲಾ ಕೊರೋನಾ ತಡೆಗಟ್ಟುವ ನಿಯಮಗಳನ್ನು ಪಾಲಿಸಬೇಕಾಗಿದೆ.
ಶನಿವಾರ ಸಂಜೆ ನಡೆದ ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಜ್ಯದಲ್ಲಿ ಕೊರೋನ ಸೋಂಕಿನ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಕೊರೋನಾ ಸೋಂಕಿನ ಸರಪಳಿಯನ್ನು ಮುರಿಯಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈಗ ಲಾಕ್ಡೌನ್ ಹೊರತುಪಡಿಸಿ ಬೇರೆ ಆಯ್ಕೆಗಳಿಲ್ಲ ಎಂದು ಅವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸುವಾಗ ಅಗತ್ಯವಿರುವ ವರ್ಗದವರ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಸರ್ಕಾರವು ತೆಗೆದುಕೊಳ್ಳುವ ನಿರ್ಧಾರವನ್ನು ಸಾರ್ವಜನಿಕರಿಗೆ ಸರಿಯಾಗಿ ತಲುಪಿಸಬೇಕು. ಇದರಿಂದ ಗೊಂದಲವನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಸರ್ಕಾರವು ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ವಾರಾಂತ್ಯದ ಲಾಕ್ಡೌನ್ ಅನ್ನು ಜಾರಿಗೆ ತಂದಿದೆ. ಈ ಸಮಯದಲ್ಲಿ ಹೋಂ ಡೆಲಿವರಿ ಮತ್ತು ಅಗತ್ಯ ಸಾಮಗ್ರಿಗಳ ವಿತರಣೆ ಮತ್ತು ವಿವಿಧ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಅನುಮತಿ ನೀಡಲಾಗಿದೆ.
ರಾತ್ರಿ ಮಲಗುವ ಮೊದಲು ಬೆಚ್ಚಗಿನ ನೀರಿನ ಜೊತೆಗೆ 2 ಲವಂಗ ಸೇವಿಸುವುದರ ಆರೋಗ್ಯ ಪ್ರಯೋಜನಗಳು#healthtips #Saakshatv #cloves https://t.co/zhOlMmGq64
— Saaksha TV (@SaakshaTv) April 8, 2021
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಏಕೆ ದೇವತೆಗಳಿಗೆ ಅರ್ಪಿಸುವುದಿಲ್ಲ ?#onion #garlic #god https://t.co/Gn1XSs80Eg
— Saaksha TV (@SaakshaTv) April 8, 2021
ಮಾವಿನಕಾಯಿಯ ಜ್ಯೂಸ್#Saakshatv #cookingrecipe #RawMango https://t.co/TjPjQ0fVzh
— Saaksha TV (@SaakshaTv) April 8, 2021
ಆವತೀಯತೆ:#Saakshatv #vishwasbharadwaj #ಆವತೀಯತೆ https://t.co/iYwrmxVGZg
— Saaksha TV (@SaakshaTv) April 11, 2021
#Mumbai #homedelivery #metropolis