ಮಡಿಕೇರಿ: ಪತ್ನಿಯು ಫೋನ್ನಲ್ಲಿ (Phone) ಬೇರೆಯವರೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಂತರ ಆರೋಪಿಯೇ ಪೊಲೀಸರಿಗೆ ಶರಣಾಗಿದ್ದಾನೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ಫೋನ್ ನಲ್ಲಿ ಮಾತನಾಡುತ್ತಿರುವ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತೆರಳಿ ಪತಿ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಶಿಲ್ಪಾ ಸೀತಮ್ಮ ಗ್ರಾಪಂ ಮಾಜಿ ಸದಸ್ಯೆ. ಅವರು ಇತ್ತೀಚೆಗೆ ರಾತ್ರಿ ವೇಳೆ ಬೇರೆಯವರೊಂದಿಗೆ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ. ಇದಕ್ಕೆ ಪತಿ ಆಕ್ಷೇಪಿಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ. ಹತ್ಯೆ ಮಾಡಿ ಪೊಲೀಸರಿಗೆ ತಾನೇ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇವರಿಬ್ಬರು ಕಳೆದ 17 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೇ ಬೋಪಣ್ಣ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ಸರ್ವಿಸ್ ಸ್ಟೇಷನ್ ಹಾಗೂ ಕಾಫಿ ತೋಟದ ಮಾಲೀಕನಾಗಿದ್ದಾನೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








