ಆಸ್ತಿ ವಿವಾದದ ಹಿನ್ನೆಲೆ ವ್ಯಕ್ತಿಯ ಬರ್ಬರ ಕೊಲೆ
ಧಾರವಾಡ : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ನಡೆದಿದೆ.
58 ವರ್ಷದ ವಿರುಪಾಕ್ಷಪ್ಪ ಆಚಮಟ್ಟಿ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಆಯಟ್ಟಿ ಗ್ರಾಮದ ಲಕ್ಷಣ ಕೊಲೆ ಆರೋಪಿಯಾಗಿದ್ದಾರೆ.
ಈ ಇಬ್ಬರ ನಡುವೆ ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿತ್ತು.
ಇಂದು ಇಬ್ಬರೂ ಮುಖಾಮುಖಿಯಾಗಿದ್ದು, ಜಗಳವಾಡಿದ್ದಾರೆ.
ಈ ವೇಳೆ ಮಾತಿಗೆ ಮಾತು ಬೆಳೆದು ಲಕ್ಷ್ಮಣ ವಿರೂಪಾಕ್ಷನಿಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.
ಸದ್ಯ ಆರೋಪಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.